12:34 AM Sunday7 - December 2025
ಬ್ರೇಕಿಂಗ್ ನ್ಯೂಸ್
ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ… Bagalkote | ಸಿದ್ಧಶ್ರೀ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪೂರ್ವಭಾವಿ ಸಭೆ : ಚಲನಚಿತ್ರಗಳ ಆಹ್ವಾನ Kodagu | ಮಡಿಕೇರಿ: ಆಕಸ್ಮಿಕ ಗುಂಡಿನ ಚೂರು ತಗುಲಿ ಇಬ್ಬರು ಯುವಕರಿಗೆ ಗಾಯ ರಾಷ್ಟ್ರವ್ಯಾಪಿ ನಿಮ್ಹಾನ್ಸ್ ಮಾದರಿಯ ಸಂಸ್ಥೆ ಸ್ಥಾಪನೆಗೆ ಸಚಿವ ಡಾ. ಶರಣಪ್ರಕಾಶ್‌ ಒತ್ತಾಯ ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ಭಾರತ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Shivamogga | ಬಸ್ ಚಾಲಕನ ಅತೀ ವೇಗ, ಅಜಾಗರೂಕತೆ: ಬೈಕ್ ಸವಾರ ಗಂಭೀರ ತೋಟಕ್ಕೆ ತೆರಳಿದ್ದ ಸಂದರ್ಭ ಏಕಾಏಕಿ ಹೆಜ್ಜೇನು ದಾಳಿ: ಮಹಿಳೆ ಸಹಿತ 3 ಮಂದಿಗೆ… ವಿರಾಜಪೇಟೆ | ಕ್ಷುಲ್ಲಕ ಕಾರಣ: ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲಿ ಯುವಕರ ಮಾರಮಾರಿ..!! “ಸ್ವಸ್ಥ ಮೈಸೂರು” ಅಭಿಯಾನ ಒಪ್ಪಂದಕ್ಕೆ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಸಹಿ

ಇತ್ತೀಚಿನ ಸುದ್ದಿ

ಪಂಜಾಬ್‌: ಆಪರೇಶನ್ ಕಮಲ ಸಂಚಿಗೆ ರಾಜ್ಯಪಾಲರ ಸಾಥ್: ಆಮ್ ಆದ್ಮಿ ಪಾರ್ಟಿ ಆರೋಪ

25/09/2022, 13:38

ಚಂಡೀಗಢ(reporterkarnataka.com),: ಪಂಜಾಬ್‌ನಲ್ಲಿ ಆಪರೇಶನ್ ಕಮಲ ನಡೆಸಲು ಸಂಚು ಹೂಡಿರುವ ಬಿಜೆಪಿಯ ಅಣತಿಯಂತೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಡೆದುಕೊಳ್ಳುತ್ತಿದ್ದಾರೆಂದು ಭಗವಂತ ಮಾನ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸರಕಾರ ಆರೋಪಿಸಿದೆ.

ಬಿಜೆಪಿಯು ಅಧಿಕಾರದಲ್ಲಿರದ ರಾಜ್ಯಗಳಲ್ಲಿ ವಿರೋಧ ಪಕ್ಷವಾಗಿ ವರ್ತಿಸುವ ಹಾಗೂ ಆಡಳಿತಾರೂಢ ಸರಕಾರವು ಕೆಲಸ ಮಾಡದಂತೆ ತಡೆಯುವ ಅದರ ಅಜೆಂಡಾವನ್ನು ಜಾರಿಗೊಳಿಸುವ ಹೊಣೆಯನ್ನು ರಾಜ್ಯಪಾಲರಿಗೆ ವಹಿಸಲಾಗಿದೆ ಎಂದು ಪಂಜಾಬ್‌ನ ಇಂಧನ ಸಚಿವ ಅಮಾನ್ ಆರೋರಾ ಆರೋಪಿಸಿದ್ದಾರೆ. ಪಂಜಾಬ್‌ನ ಆಪ್ ಸರಕಾಕ್ಕೆ ರಾಜ್ಯಪಾಲರು ಕಳುಹಿಸಿರುವ ನೋಟಿಸ್‌ಗಳು, ಭಾರತದ ಸಂವಿಧಾನಕ್ಕೆ ಅನುಗುಣವಾಗಿ ಸರಕಾರವು ಕಾರ್ಯಾಚರಿಸುವುದಕ್ಕೆ ತಡೆಯೊಡ್ಡಿವೆ ಎಂದವರು ಆರೋಪಿಸಿದರು.

“ಕಳೆದ 75 ವರ್ಷಗಳಲ್ಲಿ ಯಾವುದೇ ರಾಷ್ಟ್ರಪತಿಯವರಾಗಲಿ ಅಥವಾ ರಾಜ್ಯಪಾಲರಾಗಲಿ, ಅಧಿವೇಶವನ್ನು ಕರೆಯುವುದಕ್ಕೆ ಮುನ್ನ ಶಾಸನಸಭೆಯ ಕಲಾಪಗಳ ಪಟ್ಟಿಯನ್ನು ನೀಡುವಂತೆ ಕೇಳಿರಲಿಲ್ಲ. ಆದರೆ ಈಗ ಇದೇ ಮೊದಲ ಬಾರಿಗೆ ಇದು ನಡೆದಿದೆ. ಯಾಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಆಮ್ ಆದ್ಮಿ ಸರಕಾರವು ಶ್ರಮಿಸುವುದನ್ನು ತಡೆಗಟ್ಟಲು ಪಂಜಾಬ್‌ನ ರಾಜ್ಯಪಾಲರು ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ” ಎಂದು ಆಮನ್ ಆರೋರಾ ಆರೋಪಿಸಿದರು.

ಇತ್ತೀಚೆಗೆ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಮುಖ್ಯಮಂತ್ರಿ ಭಗವಂತ ಮಾನ್ ಅವರಿಗೆ ಪತ್ರವೊಂದನ್ನು ಬರೆದು, ಸರಕಾರದ ಕಾನೂನು ಸಲಹೆಗಾರರು ತನಗೆ ಸಮರ್ಪಕವಾಗಿ ವಿವರಣೆಗಳನ್ನು ನೀಡುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ದಿಲ್ಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರು ಆಪ್ ಸರಕಾರವು ಕಾರ್ಯನಿರ್ವಹಿಸದಂತೆ ತಡೆಯುತ್ತಿದ್ದರೆ, ಪಂಜಾಬ್‌ನಲ್ಲಿ ಈ ಕೆಲಸವನ್ನು ಬಿಜೆಪಿಯು ರಾಜ್ಯಪಾಲರಿಗೆ ವಹಿಸಿದೆ. ಆಪ್‌ನ ಜನಪ್ರಿಯತೆಯಿಂದ ಅವರು ಹೆದರಿಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷವು ಜನತೆಯ ಪರವಾದ ವಿಷಯಗಳನ್ನು ಪ್ರಸ್ತಾವಿಸದಂತೆ ತಡೆಯಲು ಬಿಜೆಪಿಯು ಎಲ್ಲಾ ವಿಧಾನಗಳನ್ನು ಅನುಸರಿಸುತ್ತಿದೆ ಎಂದವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು