3:36 PM Tuesday7 - July 2026
ಬ್ರೇಕಿಂಗ್ ನ್ಯೂಸ್
ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.…

ಇತ್ತೀಚಿನ ಸುದ್ದಿ

ಪಂಜಾಬ್‌: ಆಪರೇಶನ್ ಕಮಲ ಸಂಚಿಗೆ ರಾಜ್ಯಪಾಲರ ಸಾಥ್: ಆಮ್ ಆದ್ಮಿ ಪಾರ್ಟಿ ಆರೋಪ

25/09/2022, 13:38

ಚಂಡೀಗಢ(reporterkarnataka.com),: ಪಂಜಾಬ್‌ನಲ್ಲಿ ಆಪರೇಶನ್ ಕಮಲ ನಡೆಸಲು ಸಂಚು ಹೂಡಿರುವ ಬಿಜೆಪಿಯ ಅಣತಿಯಂತೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಡೆದುಕೊಳ್ಳುತ್ತಿದ್ದಾರೆಂದು ಭಗವಂತ ಮಾನ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸರಕಾರ ಆರೋಪಿಸಿದೆ.

ಬಿಜೆಪಿಯು ಅಧಿಕಾರದಲ್ಲಿರದ ರಾಜ್ಯಗಳಲ್ಲಿ ವಿರೋಧ ಪಕ್ಷವಾಗಿ ವರ್ತಿಸುವ ಹಾಗೂ ಆಡಳಿತಾರೂಢ ಸರಕಾರವು ಕೆಲಸ ಮಾಡದಂತೆ ತಡೆಯುವ ಅದರ ಅಜೆಂಡಾವನ್ನು ಜಾರಿಗೊಳಿಸುವ ಹೊಣೆಯನ್ನು ರಾಜ್ಯಪಾಲರಿಗೆ ವಹಿಸಲಾಗಿದೆ ಎಂದು ಪಂಜಾಬ್‌ನ ಇಂಧನ ಸಚಿವ ಅಮಾನ್ ಆರೋರಾ ಆರೋಪಿಸಿದ್ದಾರೆ. ಪಂಜಾಬ್‌ನ ಆಪ್ ಸರಕಾಕ್ಕೆ ರಾಜ್ಯಪಾಲರು ಕಳುಹಿಸಿರುವ ನೋಟಿಸ್‌ಗಳು, ಭಾರತದ ಸಂವಿಧಾನಕ್ಕೆ ಅನುಗುಣವಾಗಿ ಸರಕಾರವು ಕಾರ್ಯಾಚರಿಸುವುದಕ್ಕೆ ತಡೆಯೊಡ್ಡಿವೆ ಎಂದವರು ಆರೋಪಿಸಿದರು.

“ಕಳೆದ 75 ವರ್ಷಗಳಲ್ಲಿ ಯಾವುದೇ ರಾಷ್ಟ್ರಪತಿಯವರಾಗಲಿ ಅಥವಾ ರಾಜ್ಯಪಾಲರಾಗಲಿ, ಅಧಿವೇಶವನ್ನು ಕರೆಯುವುದಕ್ಕೆ ಮುನ್ನ ಶಾಸನಸಭೆಯ ಕಲಾಪಗಳ ಪಟ್ಟಿಯನ್ನು ನೀಡುವಂತೆ ಕೇಳಿರಲಿಲ್ಲ. ಆದರೆ ಈಗ ಇದೇ ಮೊದಲ ಬಾರಿಗೆ ಇದು ನಡೆದಿದೆ. ಯಾಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಆಮ್ ಆದ್ಮಿ ಸರಕಾರವು ಶ್ರಮಿಸುವುದನ್ನು ತಡೆಗಟ್ಟಲು ಪಂಜಾಬ್‌ನ ರಾಜ್ಯಪಾಲರು ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ” ಎಂದು ಆಮನ್ ಆರೋರಾ ಆರೋಪಿಸಿದರು.

ಇತ್ತೀಚೆಗೆ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಮುಖ್ಯಮಂತ್ರಿ ಭಗವಂತ ಮಾನ್ ಅವರಿಗೆ ಪತ್ರವೊಂದನ್ನು ಬರೆದು, ಸರಕಾರದ ಕಾನೂನು ಸಲಹೆಗಾರರು ತನಗೆ ಸಮರ್ಪಕವಾಗಿ ವಿವರಣೆಗಳನ್ನು ನೀಡುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ದಿಲ್ಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರು ಆಪ್ ಸರಕಾರವು ಕಾರ್ಯನಿರ್ವಹಿಸದಂತೆ ತಡೆಯುತ್ತಿದ್ದರೆ, ಪಂಜಾಬ್‌ನಲ್ಲಿ ಈ ಕೆಲಸವನ್ನು ಬಿಜೆಪಿಯು ರಾಜ್ಯಪಾಲರಿಗೆ ವಹಿಸಿದೆ. ಆಪ್‌ನ ಜನಪ್ರಿಯತೆಯಿಂದ ಅವರು ಹೆದರಿಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷವು ಜನತೆಯ ಪರವಾದ ವಿಷಯಗಳನ್ನು ಪ್ರಸ್ತಾವಿಸದಂತೆ ತಡೆಯಲು ಬಿಜೆಪಿಯು ಎಲ್ಲಾ ವಿಧಾನಗಳನ್ನು ಅನುಸರಿಸುತ್ತಿದೆ ಎಂದವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು