1:48 PM Tuesday20 - January 2026
ಬ್ರೇಕಿಂಗ್ ನ್ಯೂಸ್
ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ… ಜನಾರ್ದನ ರೆಡ್ಡಿ, ಶ್ರೀರಾಮುಲು ಶಕ್ತಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ: ಮಾಜಿ ಸಿಎಂ ಬಸವರಾಜ… ಕಾರು ಚಾಲಕನ ನಿರ್ಲಕ್ಷ್ಯ ಚಾಲನೆ: ಶ್ರಮಜೀವಿ ಶಿವರಾಜಪುರ ರಮೇಶ್ ದಾರುಣ ಸಾವು ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ

ಇತ್ತೀಚಿನ ಸುದ್ದಿ

ಪಂಜಾಬ್‌: ಆಪರೇಶನ್ ಕಮಲ ಸಂಚಿಗೆ ರಾಜ್ಯಪಾಲರ ಸಾಥ್: ಆಮ್ ಆದ್ಮಿ ಪಾರ್ಟಿ ಆರೋಪ

25/09/2022, 13:38

ಚಂಡೀಗಢ(reporterkarnataka.com),: ಪಂಜಾಬ್‌ನಲ್ಲಿ ಆಪರೇಶನ್ ಕಮಲ ನಡೆಸಲು ಸಂಚು ಹೂಡಿರುವ ಬಿಜೆಪಿಯ ಅಣತಿಯಂತೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಡೆದುಕೊಳ್ಳುತ್ತಿದ್ದಾರೆಂದು ಭಗವಂತ ಮಾನ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸರಕಾರ ಆರೋಪಿಸಿದೆ.

ಬಿಜೆಪಿಯು ಅಧಿಕಾರದಲ್ಲಿರದ ರಾಜ್ಯಗಳಲ್ಲಿ ವಿರೋಧ ಪಕ್ಷವಾಗಿ ವರ್ತಿಸುವ ಹಾಗೂ ಆಡಳಿತಾರೂಢ ಸರಕಾರವು ಕೆಲಸ ಮಾಡದಂತೆ ತಡೆಯುವ ಅದರ ಅಜೆಂಡಾವನ್ನು ಜಾರಿಗೊಳಿಸುವ ಹೊಣೆಯನ್ನು ರಾಜ್ಯಪಾಲರಿಗೆ ವಹಿಸಲಾಗಿದೆ ಎಂದು ಪಂಜಾಬ್‌ನ ಇಂಧನ ಸಚಿವ ಅಮಾನ್ ಆರೋರಾ ಆರೋಪಿಸಿದ್ದಾರೆ. ಪಂಜಾಬ್‌ನ ಆಪ್ ಸರಕಾಕ್ಕೆ ರಾಜ್ಯಪಾಲರು ಕಳುಹಿಸಿರುವ ನೋಟಿಸ್‌ಗಳು, ಭಾರತದ ಸಂವಿಧಾನಕ್ಕೆ ಅನುಗುಣವಾಗಿ ಸರಕಾರವು ಕಾರ್ಯಾಚರಿಸುವುದಕ್ಕೆ ತಡೆಯೊಡ್ಡಿವೆ ಎಂದವರು ಆರೋಪಿಸಿದರು.

“ಕಳೆದ 75 ವರ್ಷಗಳಲ್ಲಿ ಯಾವುದೇ ರಾಷ್ಟ್ರಪತಿಯವರಾಗಲಿ ಅಥವಾ ರಾಜ್ಯಪಾಲರಾಗಲಿ, ಅಧಿವೇಶವನ್ನು ಕರೆಯುವುದಕ್ಕೆ ಮುನ್ನ ಶಾಸನಸಭೆಯ ಕಲಾಪಗಳ ಪಟ್ಟಿಯನ್ನು ನೀಡುವಂತೆ ಕೇಳಿರಲಿಲ್ಲ. ಆದರೆ ಈಗ ಇದೇ ಮೊದಲ ಬಾರಿಗೆ ಇದು ನಡೆದಿದೆ. ಯಾಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಆಮ್ ಆದ್ಮಿ ಸರಕಾರವು ಶ್ರಮಿಸುವುದನ್ನು ತಡೆಗಟ್ಟಲು ಪಂಜಾಬ್‌ನ ರಾಜ್ಯಪಾಲರು ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ” ಎಂದು ಆಮನ್ ಆರೋರಾ ಆರೋಪಿಸಿದರು.

ಇತ್ತೀಚೆಗೆ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಮುಖ್ಯಮಂತ್ರಿ ಭಗವಂತ ಮಾನ್ ಅವರಿಗೆ ಪತ್ರವೊಂದನ್ನು ಬರೆದು, ಸರಕಾರದ ಕಾನೂನು ಸಲಹೆಗಾರರು ತನಗೆ ಸಮರ್ಪಕವಾಗಿ ವಿವರಣೆಗಳನ್ನು ನೀಡುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ದಿಲ್ಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರು ಆಪ್ ಸರಕಾರವು ಕಾರ್ಯನಿರ್ವಹಿಸದಂತೆ ತಡೆಯುತ್ತಿದ್ದರೆ, ಪಂಜಾಬ್‌ನಲ್ಲಿ ಈ ಕೆಲಸವನ್ನು ಬಿಜೆಪಿಯು ರಾಜ್ಯಪಾಲರಿಗೆ ವಹಿಸಿದೆ. ಆಪ್‌ನ ಜನಪ್ರಿಯತೆಯಿಂದ ಅವರು ಹೆದರಿಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷವು ಜನತೆಯ ಪರವಾದ ವಿಷಯಗಳನ್ನು ಪ್ರಸ್ತಾವಿಸದಂತೆ ತಡೆಯಲು ಬಿಜೆಪಿಯು ಎಲ್ಲಾ ವಿಧಾನಗಳನ್ನು ಅನುಸರಿಸುತ್ತಿದೆ ಎಂದವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು