5:10 PM Monday12 - January 2026
ಬ್ರೇಕಿಂಗ್ ನ್ಯೂಸ್
ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.… ಕಾರ್ಯಾಂಗ, ಶಾಸಕಾಂಗ, ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಿದಾಗ ಮಾತ್ರ ಸುಖಿ ರಾಜ್ಯ ಸ್ಥಾಪನೆ… ಕಿಂಗ್ ಸಿಗರೇಟ್: ಎಂಆರ್‌ಪಿ ₹170 ಇದ್ದರೂ ₹250ಕ್ಕೆ ಮಾರಾಟ; ನಿಯಂತ್ರಣವಿಲ್ಲದ ದರ; ಗ್ರಾಹಕರ… ಒಣಗಿದ್ದ ಸಿಪ್ಪೆ ಸಾಗಿಸುತ್ತಿದ್ದ ಲಾರಿ ಬೆಂಕಿಗಾಹುತಿ: ಮೈಸೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ವಾಹನ ಕೇರಳ ಸರ್ಕಾರದಿಂದ ಭಾಷಾ ಸ್ವಾತಂತ್ರ್ಯದ ಉಲ್ಲಂಘನೆ: ಸಚಿವ ಶಿವರಾಜ್ ‌ತಂಗಡಗಿ ಪ್ರಹ್ಲಾದ್ ಜೋಶಿ ಅವರಿಗೆ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತಿಹಾಸ ಗೊತ್ತಿಲ್ಲ: ಡಿಸಿಎಂ ಡಿ.ಕೆ.… ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ…

ಇತ್ತೀಚಿನ ಸುದ್ದಿ

ಪಂಜಾಬ್‌: ಆಪರೇಶನ್ ಕಮಲ ಸಂಚಿಗೆ ರಾಜ್ಯಪಾಲರ ಸಾಥ್: ಆಮ್ ಆದ್ಮಿ ಪಾರ್ಟಿ ಆರೋಪ

25/09/2022, 13:38

ಚಂಡೀಗಢ(reporterkarnataka.com),: ಪಂಜಾಬ್‌ನಲ್ಲಿ ಆಪರೇಶನ್ ಕಮಲ ನಡೆಸಲು ಸಂಚು ಹೂಡಿರುವ ಬಿಜೆಪಿಯ ಅಣತಿಯಂತೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಡೆದುಕೊಳ್ಳುತ್ತಿದ್ದಾರೆಂದು ಭಗವಂತ ಮಾನ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸರಕಾರ ಆರೋಪಿಸಿದೆ.

ಬಿಜೆಪಿಯು ಅಧಿಕಾರದಲ್ಲಿರದ ರಾಜ್ಯಗಳಲ್ಲಿ ವಿರೋಧ ಪಕ್ಷವಾಗಿ ವರ್ತಿಸುವ ಹಾಗೂ ಆಡಳಿತಾರೂಢ ಸರಕಾರವು ಕೆಲಸ ಮಾಡದಂತೆ ತಡೆಯುವ ಅದರ ಅಜೆಂಡಾವನ್ನು ಜಾರಿಗೊಳಿಸುವ ಹೊಣೆಯನ್ನು ರಾಜ್ಯಪಾಲರಿಗೆ ವಹಿಸಲಾಗಿದೆ ಎಂದು ಪಂಜಾಬ್‌ನ ಇಂಧನ ಸಚಿವ ಅಮಾನ್ ಆರೋರಾ ಆರೋಪಿಸಿದ್ದಾರೆ. ಪಂಜಾಬ್‌ನ ಆಪ್ ಸರಕಾಕ್ಕೆ ರಾಜ್ಯಪಾಲರು ಕಳುಹಿಸಿರುವ ನೋಟಿಸ್‌ಗಳು, ಭಾರತದ ಸಂವಿಧಾನಕ್ಕೆ ಅನುಗುಣವಾಗಿ ಸರಕಾರವು ಕಾರ್ಯಾಚರಿಸುವುದಕ್ಕೆ ತಡೆಯೊಡ್ಡಿವೆ ಎಂದವರು ಆರೋಪಿಸಿದರು.

“ಕಳೆದ 75 ವರ್ಷಗಳಲ್ಲಿ ಯಾವುದೇ ರಾಷ್ಟ್ರಪತಿಯವರಾಗಲಿ ಅಥವಾ ರಾಜ್ಯಪಾಲರಾಗಲಿ, ಅಧಿವೇಶವನ್ನು ಕರೆಯುವುದಕ್ಕೆ ಮುನ್ನ ಶಾಸನಸಭೆಯ ಕಲಾಪಗಳ ಪಟ್ಟಿಯನ್ನು ನೀಡುವಂತೆ ಕೇಳಿರಲಿಲ್ಲ. ಆದರೆ ಈಗ ಇದೇ ಮೊದಲ ಬಾರಿಗೆ ಇದು ನಡೆದಿದೆ. ಯಾಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಆಮ್ ಆದ್ಮಿ ಸರಕಾರವು ಶ್ರಮಿಸುವುದನ್ನು ತಡೆಗಟ್ಟಲು ಪಂಜಾಬ್‌ನ ರಾಜ್ಯಪಾಲರು ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ” ಎಂದು ಆಮನ್ ಆರೋರಾ ಆರೋಪಿಸಿದರು.

ಇತ್ತೀಚೆಗೆ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಮುಖ್ಯಮಂತ್ರಿ ಭಗವಂತ ಮಾನ್ ಅವರಿಗೆ ಪತ್ರವೊಂದನ್ನು ಬರೆದು, ಸರಕಾರದ ಕಾನೂನು ಸಲಹೆಗಾರರು ತನಗೆ ಸಮರ್ಪಕವಾಗಿ ವಿವರಣೆಗಳನ್ನು ನೀಡುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ದಿಲ್ಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರು ಆಪ್ ಸರಕಾರವು ಕಾರ್ಯನಿರ್ವಹಿಸದಂತೆ ತಡೆಯುತ್ತಿದ್ದರೆ, ಪಂಜಾಬ್‌ನಲ್ಲಿ ಈ ಕೆಲಸವನ್ನು ಬಿಜೆಪಿಯು ರಾಜ್ಯಪಾಲರಿಗೆ ವಹಿಸಿದೆ. ಆಪ್‌ನ ಜನಪ್ರಿಯತೆಯಿಂದ ಅವರು ಹೆದರಿಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷವು ಜನತೆಯ ಪರವಾದ ವಿಷಯಗಳನ್ನು ಪ್ರಸ್ತಾವಿಸದಂತೆ ತಡೆಯಲು ಬಿಜೆಪಿಯು ಎಲ್ಲಾ ವಿಧಾನಗಳನ್ನು ಅನುಸರಿಸುತ್ತಿದೆ ಎಂದವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು