7:07 AM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಪಂಜಾಬ್‌: ಆಪರೇಶನ್ ಕಮಲ ಸಂಚಿಗೆ ರಾಜ್ಯಪಾಲರ ಸಾಥ್: ಆಮ್ ಆದ್ಮಿ ಪಾರ್ಟಿ ಆರೋಪ

25/09/2022, 13:38

ಚಂಡೀಗಢ(reporterkarnataka.com),: ಪಂಜಾಬ್‌ನಲ್ಲಿ ಆಪರೇಶನ್ ಕಮಲ ನಡೆಸಲು ಸಂಚು ಹೂಡಿರುವ ಬಿಜೆಪಿಯ ಅಣತಿಯಂತೆ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ನಡೆದುಕೊಳ್ಳುತ್ತಿದ್ದಾರೆಂದು ಭಗವಂತ ಮಾನ್ ನೇತೃತ್ವದ ಆಮ್ ಆದ್ಮಿ ಪಾರ್ಟಿ ಸರಕಾರ ಆರೋಪಿಸಿದೆ.

ಬಿಜೆಪಿಯು ಅಧಿಕಾರದಲ್ಲಿರದ ರಾಜ್ಯಗಳಲ್ಲಿ ವಿರೋಧ ಪಕ್ಷವಾಗಿ ವರ್ತಿಸುವ ಹಾಗೂ ಆಡಳಿತಾರೂಢ ಸರಕಾರವು ಕೆಲಸ ಮಾಡದಂತೆ ತಡೆಯುವ ಅದರ ಅಜೆಂಡಾವನ್ನು ಜಾರಿಗೊಳಿಸುವ ಹೊಣೆಯನ್ನು ರಾಜ್ಯಪಾಲರಿಗೆ ವಹಿಸಲಾಗಿದೆ ಎಂದು ಪಂಜಾಬ್‌ನ ಇಂಧನ ಸಚಿವ ಅಮಾನ್ ಆರೋರಾ ಆರೋಪಿಸಿದ್ದಾರೆ. ಪಂಜಾಬ್‌ನ ಆಪ್ ಸರಕಾಕ್ಕೆ ರಾಜ್ಯಪಾಲರು ಕಳುಹಿಸಿರುವ ನೋಟಿಸ್‌ಗಳು, ಭಾರತದ ಸಂವಿಧಾನಕ್ಕೆ ಅನುಗುಣವಾಗಿ ಸರಕಾರವು ಕಾರ್ಯಾಚರಿಸುವುದಕ್ಕೆ ತಡೆಯೊಡ್ಡಿವೆ ಎಂದವರು ಆರೋಪಿಸಿದರು.

“ಕಳೆದ 75 ವರ್ಷಗಳಲ್ಲಿ ಯಾವುದೇ ರಾಷ್ಟ್ರಪತಿಯವರಾಗಲಿ ಅಥವಾ ರಾಜ್ಯಪಾಲರಾಗಲಿ, ಅಧಿವೇಶವನ್ನು ಕರೆಯುವುದಕ್ಕೆ ಮುನ್ನ ಶಾಸನಸಭೆಯ ಕಲಾಪಗಳ ಪಟ್ಟಿಯನ್ನು ನೀಡುವಂತೆ ಕೇಳಿರಲಿಲ್ಲ. ಆದರೆ ಈಗ ಇದೇ ಮೊದಲ ಬಾರಿಗೆ ಇದು ನಡೆದಿದೆ. ಯಾಕೆಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಆಮ್ ಆದ್ಮಿ ಸರಕಾರವು ಶ್ರಮಿಸುವುದನ್ನು ತಡೆಗಟ್ಟಲು ಪಂಜಾಬ್‌ನ ರಾಜ್ಯಪಾಲರು ಬಿಜೆಪಿ ಹಾಗೂ ಕಾಂಗ್ರೆಸ್ ಜೊತೆ ಕೈಜೋಡಿಸಿದ್ದಾರೆ” ಎಂದು ಆಮನ್ ಆರೋರಾ ಆರೋಪಿಸಿದರು.

ಇತ್ತೀಚೆಗೆ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರು ಮುಖ್ಯಮಂತ್ರಿ ಭಗವಂತ ಮಾನ್ ಅವರಿಗೆ ಪತ್ರವೊಂದನ್ನು ಬರೆದು, ಸರಕಾರದ ಕಾನೂನು ಸಲಹೆಗಾರರು ತನಗೆ ಸಮರ್ಪಕವಾಗಿ ವಿವರಣೆಗಳನ್ನು ನೀಡುತ್ತಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದ್ದರು.

ದಿಲ್ಲಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಅವರು ಆಪ್ ಸರಕಾರವು ಕಾರ್ಯನಿರ್ವಹಿಸದಂತೆ ತಡೆಯುತ್ತಿದ್ದರೆ, ಪಂಜಾಬ್‌ನಲ್ಲಿ ಈ ಕೆಲಸವನ್ನು ಬಿಜೆಪಿಯು ರಾಜ್ಯಪಾಲರಿಗೆ ವಹಿಸಿದೆ. ಆಪ್‌ನ ಜನಪ್ರಿಯತೆಯಿಂದ ಅವರು ಹೆದರಿಕೊಂಡಿದ್ದಾರೆ. ಆಮ್ ಆದ್ಮಿ ಪಕ್ಷವು ಜನತೆಯ ಪರವಾದ ವಿಷಯಗಳನ್ನು ಪ್ರಸ್ತಾವಿಸದಂತೆ ತಡೆಯಲು ಬಿಜೆಪಿಯು ಎಲ್ಲಾ ವಿಧಾನಗಳನ್ನು ಅನುಸರಿಸುತ್ತಿದೆ ಎಂದವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು