5:03 PM Monday7 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಪಟಾಕಿ ಸಿಡಿಸದೆ ಎಲೆಕ್ಷನ್ ವಿಜಯೋತ್ಸವ: ಕ್ರಮ ಕೈಗೊಳ್ಳಲು ಪರಿಸರಕ್ಕಾಗಿ ನಾವು ಸಂಘಟನೆ ಆಗ್ರಹ

31/05/2024, 18:20

ಮಂಗಳೂರು(reporterkarnataka.com): ಚುನಾವಣಾ ಫಲಿತಾಂಶವನ್ನು ಪಟಾಕಿ ಸಿಡಿಸದೆ ಸಂಭ್ರಮಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಹಾಗೂ ಕರ್ನಾಟಕ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳಿಗೆ ಪರಿಸರಕ್ಕಾಗಿ ನಾವು ಸಂಘಟನೆ ಮನವಿ ಮಾಡಿದೆ.
ಈ ವರ್ಷದ ಬೇಸಿಗೆಯಲ್ಲಿ, ಹವಾಮಾನ ವೈಪ್ಯರೀತ್ಯ ಮತ್ತು ಭೂತಾಪಮಾನದ ಬಿಸಿಯನ್ನು ನಾವೆಲ್ಲರೂ ಅನುಭವಿಸಿದ್ದೇವೆ. ಕರ್ನಾಟಕದಾದ್ಯಂತ ನೀರಿನ ಬವಣೆಯನ್ನು ಕಂಡಿದ್ದೇವೆ. ಸಾರ್ವಜನಿಕರ ಸಹಕಾರ ಮತ್ತು ಸರ್ಕಾರದ ಆಡಳಿತ ಯಂತ್ರದಿಂದ ಮಾತ್ರ ಸರಕಾರ ಹಮ್ಮಿಕೊಂಡ ಪರಿಹಾರ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಾಗುತ್ತದೆ‌. ಸದ್ಯದಲ್ಲೇ ಚುನಾವಣೆಗಳು ಮುಕ್ತಾಯವಾಗಿ, ಜೂನ್ 4ರಂದು ಮತ ಎಣಿಕೆಯಾಗಿ, ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳ ಬೆಂಬಲಿಗರು ತಮ್ಮ ಹರ್ಷೋದ್ಗಾರವನ್ನು ವ್ಯಕ್ತಪಡಿಸುವುದು ಸಹಜ. ಈ ಸಂದರ್ಭದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸುವುದು ರೂಢಿಯಾಗಿದೆ. ಆದರೆ, ಪಟಾಕಿಯಲ್ಲಿರುವ ಸಿಡಿಮದ್ದು, ಕಾರ್ಬನ್ ಮಾನಾಕ್ಸೈಡ್ ಮತ್ತು ಸಲ್ಫರ್ ಡೈ ಆಕ್ಸೈಡ್ ನಂತಹ ಅನೇಕ ವಿಷ ರಾಸಾಯನಿಕಗಳನ್ನು ಹೊರಸೂಸುತ್ತವೆ. ಇವು ಮಾನವರಿಗೆ ಹಾನಿಕಾರಕವಷ್ಟೇ ಅಲ್ಲ, ಪರಿಸರ ಹಾಗೂ ಶಬ್ದ ಮಾಲಿನ್ಯಕ್ಕೂ ಕಾರಣವಾಗುತ್ತವೆ. ಹಾಗಾಗಿ ಈ ಸಂದರ್ಭಗಳಲ್ಲಿ ನಾವು ಪಟಾಕಿ ಸಿಡಿಸದೇ ಸಂಭ್ರಮಿಸುವುದು ಉತ್ತಮ ವಿಧಾನ.
ಈ ಸಂಬಂಧದಲ್ಲಿ, ಪಟಾಕಿಯನ್ನು ಸಿಡಿಸುವುದರಿಂದ ಉಂಟಾಗುವ ಪರಿಸರ ಮತ್ತು ಶಬ್ದ ಮಾಲಿನ್ಯವನ್ನು ತಡೆಗಟ್ಟುವುದು ಅಗತ್ಯವೆಂದು, ನ್ಯಾಯಮೂರ್ತಿ ಬೋಪಣ್ಣ ಅವರನ್ನು ಒಳಗೊಂಡ ಸುಪ್ರೀಂಕೋರ್ಟಿನ ನ್ಯಾಯಪೀಠ, ನವೆಂಬರ್ , ೨೦೨೩ ರಲ್ಲಿ ತೀರ್ಪು ನೀಡಿದೆ.
ಈ ಹಿನ್ನೆಲೆಯಲ್ಲಿ, ಈ ಬಾರಿಯ ಚುನಾವಣಾ ಫಲಿತಾಂಶದ ಸಂಭ್ರಮವನ್ನು, ಸಂಬಂಧಪಟ್ಟವರು ಪಟಾಕಿಗಳನ್ನು ಸಿಡಿಸದೇ ಆಚರಿಸುವಂತೆ ಮಾಡಲು, ತಾವು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕೆಂದು ಸಂಘಟನೆ ಆಗ್ರಹಿಸಿದೆ.
ಜೂನ್ 5ರಂದು ವಿಶ್ವ ಪರಿಸರ ದಿನವಾದ್ದರಿಂದ ಅಭ್ಯರ್ಥಿಗಳು, ಚುನಾವಣೆಯ ತಮ್ಮ ಗೆಲುವನ್ನು, ಅವರ ಕ್ಷೇತ್ರದಲ್ಲಿ ಯೋಗ್ಯ ಮರವಾಗಬಲ್ಲ 5 ಸಸಿಗಳನ್ನು ನೆಟ್ಟು ಪೋಷಿಸುವುದರ ಮೂಲಕ ತಮ್ಮ ಸಂಭ್ರಮ ಹಂಚಿಕೊಳ್ಳಲಿ ಹಾಗೂ ಪರಿಸರ ಸಂರಕ್ಷಣೆಗೆ ಕೂಡ ನಾಂದಿ ಹಾಡಬಹುದು ಎಂದು ಸಂಘಟನೆ ಸಲಹೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು