3:10 PM Wednesday10 - December 2025
ಬ್ರೇಕಿಂಗ್ ನ್ಯೂಸ್
ಬೆಂಗಳೂರು ನಗರದಲ್ಲಿ ಕ್ವಾಂಟಮ್ ಮೆಟೀರಿಯಲ್ಸ್ ನೆಟ್‌ವರ್ಕ್ (Q-MINt) ಸ್ಥಾಪಿಸಲು ಪ್ರಧಾನಿಗೆ ಸಿಎಂ ಪತ್ರ ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ… ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

ಇತ್ತೀಚಿನ ಸುದ್ದಿ

ಪತ್ರಕರ್ತ ಹೇಮಂತ್ ಸಂಪಾಜೆಗೆ ‘ಫೀಲ್ಡ್ ಮಾರ್ಷಲ್ ಕೆ.ಎಂ ಕಾರಿಯಪ್ಪ’ ರಾಜ್ಯ ಪ್ರಶಸ್ತಿ ಪ್ರದಾನ

27/06/2022, 00:35

ಮೈಸೂರು(reporterkarnataka.com): ಭಾರತೀಯ ಸೇನೆಯ ಮೊದಲ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಹೆಸರಿನಲ್ಲಿ ಕರ್ನಾಟಕದ ಇತಿಹಾಸದಲ್ಲಿ ಮೊದಲ ಸಲ ಕೊಡಮಾಡಲಾದ ‘ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ರಾಜ್ಯ ಪ್ರಶಸ್ತಿಯನ್ನು ಪತ್ರಕರ್ತ ಹೇಮಂತ್ ಸಂಪಾಜೆಗೆ ಮೈಸೂರಿನಲ್ಲಿ ಶನಿವಾರ ಪ್ರದಾನ ಮಾಡಲಾಯಿತು. 

ಮಾಜಿ ಸೈನಿಕ ಹಾಲಿ ಶಾಸಕ ಸಿ.ಎನ್.ಮಂಜೇಗೌಡ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಇದೇ ವೇಳೆ ಹೇಮಂತ್ ಸಂಪಾಜೆಯವರನ್ನು ಅಭಿನಂದಿಸಿ ಮಾತನಾಡಿದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ ಎನ್ .ಕೆ.ಶಿವಣ್ಣ, ಹೇಮಂತ್ ಒಬ್ಬರು ಸಮಾಜಮುಖಿ ಪತ್ರಕರ್ತ, ಎಲ್ಲಕ್ಕಿಂತ ಹೆಚ್ಚಾಗಿ ಎಲ್ಲರೊಳಗೆ ಒಂದಾಗುವ ಸ್ನೇಹ ಜೀವಿ. ಇಂತಹ ಪತ್ರಕರ್ತರ ಅವಶ್ಯಕತೆ ಸಮಾಜಕ್ಕಿದೆ. ಅಂಥಹವರನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ನಮ್ಮ ಸಂಘಕ್ಕೆ ಸಂತೋಷವಾಗುತ್ತಿದೆ ಎಂದು ತಿಳಿಸಿದರು.

ಸೇನೆ ಸೇರಬೇಕು ಎನ್ನುವುದು ನನ್ನ ಜೀವನದ ಕನಸಾಗಿತ್ತು. ಅದು ಸಾಧ್ಯವಾಗಿರಲಿಲ್ಲ. ಆದರೆ ಇಂದು ದೇಶಸೇವೆಗೈದ ಸೇನಾಧಿಕಾರಿಗಳ ಸಮ್ಮುಖದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪರ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸುವ ಮೂಲಕ ಆ ಕೊರತೆ ನೀಗಿದೆ. ಇದು ಯಾವುದೋ ಒಂದು ಜನ್ಮದಲ್ಲಿ ಮಾಡಿದ ಪುಣ್ಯದ ಫಲವಾಗಿದೆ ಎಂದು ಹೇಮಂತ್ ಸಂಪಾಜೆ ಹೇಳಿದರು.

ವಿವೇಕಾನಂದ ನಗರದ ನಾಗಮ್ಮ ಕಲ್ಯಾಣ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಮಾಜಿ ಸೈನ್ಯಾಧಿಕಾರಿಗಳು, ಮಾಜಿ ಸೈನಿಕರು, ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು. ಇದೇ ವೇಳೆ ಸೇನೆಯಲ್ಲಿ ಸೇವೆ ಸಲ್ಲಿಸಿ ಅತ್ಯುತ್ತಮ ಸಾಧನೆಗೈದ ಹತ್ತು ಮಂದಿ ಸೈನಿಕರಿಗೂ ‘ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕ ಸಂಘ ಮೈಸೂರು ಘಟಕದ ಜಿಲ್ಲಾಧ್ಯಕ್ಷ ಕೆ.ಪಿ.ದಿವಾಕರ್, ಮಾಜಿ ಸೈನಿಕರ ಸಂಘದ ಪ್ರಧಾನ ಕಾರ್ಯದರ್ಶಿ ನಂಜುಂಡಸ್ವಾಮಿ, ಜಂಟಿ ಕಾರ್ಯದರ್ಶಿ ಧರ್ಮೇಂದ್ರ ಬಿ.ಕೆ, ಸಹ ಕಾರ್ಯದರ್ಶಿ ದೇವರಾಜು ಡಿ.ಬಿ., ಸಂಘಟನಾ ಕಾರ್ಯದರ್ಶಿ ರವೀಂದ್ರ ಕುಮಾರ್, ಖಜಾಂಚಿ ಜೀವನ್, ಲಾಲೂ ಕುಮಾರ್ ಕಡ್ಯದ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು