12:53 PM Sunday20 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಪತ್ರಕರ್ತ ಹೇಮಂತ್ ಸಂಪಾಜೆಗೆ ‘ಫೀಲ್ಡ್ ಮಾರ್ಷಲ್ ಕೆ.ಎಂ ಕಾರಿಯಪ್ಪ’ ರಾಜ್ಯ ಪ್ರಶಸ್ತಿ ಪ್ರದಾನ

27/06/2022, 00:35

ಮೈಸೂರು(reporterkarnataka.com): ಭಾರತೀಯ ಸೇನೆಯ ಮೊದಲ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಹೆಸರಿನಲ್ಲಿ ಕರ್ನಾಟಕದ ಇತಿಹಾಸದಲ್ಲಿ ಮೊದಲ ಸಲ ಕೊಡಮಾಡಲಾದ ‘ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ರಾಜ್ಯ ಪ್ರಶಸ್ತಿಯನ್ನು ಪತ್ರಕರ್ತ ಹೇಮಂತ್ ಸಂಪಾಜೆಗೆ ಮೈಸೂರಿನಲ್ಲಿ ಶನಿವಾರ ಪ್ರದಾನ ಮಾಡಲಾಯಿತು. 

ಮಾಜಿ ಸೈನಿಕ ಹಾಲಿ ಶಾಸಕ ಸಿ.ಎನ್.ಮಂಜೇಗೌಡ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಇದೇ ವೇಳೆ ಹೇಮಂತ್ ಸಂಪಾಜೆಯವರನ್ನು ಅಭಿನಂದಿಸಿ ಮಾತನಾಡಿದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ ಎನ್ .ಕೆ.ಶಿವಣ್ಣ, ಹೇಮಂತ್ ಒಬ್ಬರು ಸಮಾಜಮುಖಿ ಪತ್ರಕರ್ತ, ಎಲ್ಲಕ್ಕಿಂತ ಹೆಚ್ಚಾಗಿ ಎಲ್ಲರೊಳಗೆ ಒಂದಾಗುವ ಸ್ನೇಹ ಜೀವಿ. ಇಂತಹ ಪತ್ರಕರ್ತರ ಅವಶ್ಯಕತೆ ಸಮಾಜಕ್ಕಿದೆ. ಅಂಥಹವರನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ನಮ್ಮ ಸಂಘಕ್ಕೆ ಸಂತೋಷವಾಗುತ್ತಿದೆ ಎಂದು ತಿಳಿಸಿದರು.

ಸೇನೆ ಸೇರಬೇಕು ಎನ್ನುವುದು ನನ್ನ ಜೀವನದ ಕನಸಾಗಿತ್ತು. ಅದು ಸಾಧ್ಯವಾಗಿರಲಿಲ್ಲ. ಆದರೆ ಇಂದು ದೇಶಸೇವೆಗೈದ ಸೇನಾಧಿಕಾರಿಗಳ ಸಮ್ಮುಖದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪರ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸುವ ಮೂಲಕ ಆ ಕೊರತೆ ನೀಗಿದೆ. ಇದು ಯಾವುದೋ ಒಂದು ಜನ್ಮದಲ್ಲಿ ಮಾಡಿದ ಪುಣ್ಯದ ಫಲವಾಗಿದೆ ಎಂದು ಹೇಮಂತ್ ಸಂಪಾಜೆ ಹೇಳಿದರು.

ವಿವೇಕಾನಂದ ನಗರದ ನಾಗಮ್ಮ ಕಲ್ಯಾಣ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಮಾಜಿ ಸೈನ್ಯಾಧಿಕಾರಿಗಳು, ಮಾಜಿ ಸೈನಿಕರು, ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು. ಇದೇ ವೇಳೆ ಸೇನೆಯಲ್ಲಿ ಸೇವೆ ಸಲ್ಲಿಸಿ ಅತ್ಯುತ್ತಮ ಸಾಧನೆಗೈದ ಹತ್ತು ಮಂದಿ ಸೈನಿಕರಿಗೂ ‘ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕ ಸಂಘ ಮೈಸೂರು ಘಟಕದ ಜಿಲ್ಲಾಧ್ಯಕ್ಷ ಕೆ.ಪಿ.ದಿವಾಕರ್, ಮಾಜಿ ಸೈನಿಕರ ಸಂಘದ ಪ್ರಧಾನ ಕಾರ್ಯದರ್ಶಿ ನಂಜುಂಡಸ್ವಾಮಿ, ಜಂಟಿ ಕಾರ್ಯದರ್ಶಿ ಧರ್ಮೇಂದ್ರ ಬಿ.ಕೆ, ಸಹ ಕಾರ್ಯದರ್ಶಿ ದೇವರಾಜು ಡಿ.ಬಿ., ಸಂಘಟನಾ ಕಾರ್ಯದರ್ಶಿ ರವೀಂದ್ರ ಕುಮಾರ್, ಖಜಾಂಚಿ ಜೀವನ್, ಲಾಲೂ ಕುಮಾರ್ ಕಡ್ಯದ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು