7:45 AM Monday5 - January 2026
ಬ್ರೇಕಿಂಗ್ ನ್ಯೂಸ್
ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ Kodagu | ಸಾರ್ವಜನಿಕವಾಗಿ ಬಂದೂಕು ಪ್ರದರ್ಶನ: 3 ಮಂದಿ ಆರೋಪಿಗಳ ಬಂಧನ ಸೋಶಿಯಲ್ ಮೀಡಿಯಾ ಪವರ್: 60 ವರ್ಷದ ವೃದ್ದನನ್ನು ಕುಟುಂಬದೊಂದಿಗೆ ಮತ್ತೆ ಒಂದಾಗಿಸಿದ ರೀಲ್ಸ್! ಜಗತ್ತಿನ 3ನೇ ಅತಿ ಎತ್ತರದ ಮೌಂಟ್ ಕೆನ್ಯಾ ಪರ್ವತ ಏರಿದ ಮಂಗಳೂರು ಮೂಲದ… Bangalore | ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಂಪುಟದ ಸಮ್ಮತಿ: 153 ಎಕರೆ… ಬಳ್ಳಾರಿ ಫೈಯರಿಂಗ್ | ಕೊಲೆ ಪ್ರಕರಣ ದಾಖಲಿಸಿ ಶಾಸಕರ ಕೂಡಲೇ ಬಂಧಿಸಿ: ಆರ್.ಅಶೋಕ್… ಬಳ್ಳಾರಿ ಗಲಭೆ ಸಿಬಿಐ ಅಥವಾ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಯಲಿ: ಮಾಜಿ ಸಿಎಂ… ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ನಡೆಯಲಿ: ಪ್ರತಿಪಕ್ಷದ ನಾಯಕ ಆರ್.ಅಶೋಕ್ ಆಗ್ರಹ 6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ…

ಇತ್ತೀಚಿನ ಸುದ್ದಿ

ಪತ್ರಕರ್ತ ಹೇಮಂತ್ ಸಂಪಾಜೆಗೆ ‘ಫೀಲ್ಡ್ ಮಾರ್ಷಲ್ ಕೆ.ಎಂ ಕಾರಿಯಪ್ಪ’ ರಾಜ್ಯ ಪ್ರಶಸ್ತಿ ಪ್ರದಾನ

27/06/2022, 00:35

ಮೈಸೂರು(reporterkarnataka.com): ಭಾರತೀಯ ಸೇನೆಯ ಮೊದಲ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಹೆಸರಿನಲ್ಲಿ ಕರ್ನಾಟಕದ ಇತಿಹಾಸದಲ್ಲಿ ಮೊದಲ ಸಲ ಕೊಡಮಾಡಲಾದ ‘ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ರಾಜ್ಯ ಪ್ರಶಸ್ತಿಯನ್ನು ಪತ್ರಕರ್ತ ಹೇಮಂತ್ ಸಂಪಾಜೆಗೆ ಮೈಸೂರಿನಲ್ಲಿ ಶನಿವಾರ ಪ್ರದಾನ ಮಾಡಲಾಯಿತು. 

ಮಾಜಿ ಸೈನಿಕ ಹಾಲಿ ಶಾಸಕ ಸಿ.ಎನ್.ಮಂಜೇಗೌಡ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಇದೇ ವೇಳೆ ಹೇಮಂತ್ ಸಂಪಾಜೆಯವರನ್ನು ಅಭಿನಂದಿಸಿ ಮಾತನಾಡಿದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ ಎನ್ .ಕೆ.ಶಿವಣ್ಣ, ಹೇಮಂತ್ ಒಬ್ಬರು ಸಮಾಜಮುಖಿ ಪತ್ರಕರ್ತ, ಎಲ್ಲಕ್ಕಿಂತ ಹೆಚ್ಚಾಗಿ ಎಲ್ಲರೊಳಗೆ ಒಂದಾಗುವ ಸ್ನೇಹ ಜೀವಿ. ಇಂತಹ ಪತ್ರಕರ್ತರ ಅವಶ್ಯಕತೆ ಸಮಾಜಕ್ಕಿದೆ. ಅಂಥಹವರನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ನಮ್ಮ ಸಂಘಕ್ಕೆ ಸಂತೋಷವಾಗುತ್ತಿದೆ ಎಂದು ತಿಳಿಸಿದರು.

ಸೇನೆ ಸೇರಬೇಕು ಎನ್ನುವುದು ನನ್ನ ಜೀವನದ ಕನಸಾಗಿತ್ತು. ಅದು ಸಾಧ್ಯವಾಗಿರಲಿಲ್ಲ. ಆದರೆ ಇಂದು ದೇಶಸೇವೆಗೈದ ಸೇನಾಧಿಕಾರಿಗಳ ಸಮ್ಮುಖದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪರ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸುವ ಮೂಲಕ ಆ ಕೊರತೆ ನೀಗಿದೆ. ಇದು ಯಾವುದೋ ಒಂದು ಜನ್ಮದಲ್ಲಿ ಮಾಡಿದ ಪುಣ್ಯದ ಫಲವಾಗಿದೆ ಎಂದು ಹೇಮಂತ್ ಸಂಪಾಜೆ ಹೇಳಿದರು.

ವಿವೇಕಾನಂದ ನಗರದ ನಾಗಮ್ಮ ಕಲ್ಯಾಣ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಮಾಜಿ ಸೈನ್ಯಾಧಿಕಾರಿಗಳು, ಮಾಜಿ ಸೈನಿಕರು, ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು. ಇದೇ ವೇಳೆ ಸೇನೆಯಲ್ಲಿ ಸೇವೆ ಸಲ್ಲಿಸಿ ಅತ್ಯುತ್ತಮ ಸಾಧನೆಗೈದ ಹತ್ತು ಮಂದಿ ಸೈನಿಕರಿಗೂ ‘ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕ ಸಂಘ ಮೈಸೂರು ಘಟಕದ ಜಿಲ್ಲಾಧ್ಯಕ್ಷ ಕೆ.ಪಿ.ದಿವಾಕರ್, ಮಾಜಿ ಸೈನಿಕರ ಸಂಘದ ಪ್ರಧಾನ ಕಾರ್ಯದರ್ಶಿ ನಂಜುಂಡಸ್ವಾಮಿ, ಜಂಟಿ ಕಾರ್ಯದರ್ಶಿ ಧರ್ಮೇಂದ್ರ ಬಿ.ಕೆ, ಸಹ ಕಾರ್ಯದರ್ಶಿ ದೇವರಾಜು ಡಿ.ಬಿ., ಸಂಘಟನಾ ಕಾರ್ಯದರ್ಶಿ ರವೀಂದ್ರ ಕುಮಾರ್, ಖಜಾಂಚಿ ಜೀವನ್, ಲಾಲೂ ಕುಮಾರ್ ಕಡ್ಯದ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು