6:13 PM Monday2 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ಪತ್ರಕರ್ತ ಹೇಮಂತ್ ಸಂಪಾಜೆಗೆ ‘ಫೀಲ್ಡ್ ಮಾರ್ಷಲ್ ಕೆ.ಎಂ ಕಾರಿಯಪ್ಪ’ ರಾಜ್ಯ ಪ್ರಶಸ್ತಿ ಪ್ರದಾನ

27/06/2022, 00:35

ಮೈಸೂರು(reporterkarnataka.com): ಭಾರತೀಯ ಸೇನೆಯ ಮೊದಲ ಮಹಾದಂಡ ನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ ಹೆಸರಿನಲ್ಲಿ ಕರ್ನಾಟಕದ ಇತಿಹಾಸದಲ್ಲಿ ಮೊದಲ ಸಲ ಕೊಡಮಾಡಲಾದ ‘ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ರಾಜ್ಯ ಪ್ರಶಸ್ತಿಯನ್ನು ಪತ್ರಕರ್ತ ಹೇಮಂತ್ ಸಂಪಾಜೆಗೆ ಮೈಸೂರಿನಲ್ಲಿ ಶನಿವಾರ ಪ್ರದಾನ ಮಾಡಲಾಯಿತು. 

ಮಾಜಿ ಸೈನಿಕ ಹಾಲಿ ಶಾಸಕ ಸಿ.ಎನ್.ಮಂಜೇಗೌಡ ಅವರು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಇದೇ ವೇಳೆ ಹೇಮಂತ್ ಸಂಪಾಜೆಯವರನ್ನು ಅಭಿನಂದಿಸಿ ಮಾತನಾಡಿದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ ಎನ್ .ಕೆ.ಶಿವಣ್ಣ, ಹೇಮಂತ್ ಒಬ್ಬರು ಸಮಾಜಮುಖಿ ಪತ್ರಕರ್ತ, ಎಲ್ಲಕ್ಕಿಂತ ಹೆಚ್ಚಾಗಿ ಎಲ್ಲರೊಳಗೆ ಒಂದಾಗುವ ಸ್ನೇಹ ಜೀವಿ. ಇಂತಹ ಪತ್ರಕರ್ತರ ಅವಶ್ಯಕತೆ ಸಮಾಜಕ್ಕಿದೆ. ಅಂಥಹವರನ್ನು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ನಮ್ಮ ಸಂಘಕ್ಕೆ ಸಂತೋಷವಾಗುತ್ತಿದೆ ಎಂದು ತಿಳಿಸಿದರು.

ಸೇನೆ ಸೇರಬೇಕು ಎನ್ನುವುದು ನನ್ನ ಜೀವನದ ಕನಸಾಗಿತ್ತು. ಅದು ಸಾಧ್ಯವಾಗಿರಲಿಲ್ಲ. ಆದರೆ ಇಂದು ದೇಶಸೇವೆಗೈದ ಸೇನಾಧಿಕಾರಿಗಳ ಸಮ್ಮುಖದಲ್ಲಿ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪರ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸುವ ಮೂಲಕ ಆ ಕೊರತೆ ನೀಗಿದೆ. ಇದು ಯಾವುದೋ ಒಂದು ಜನ್ಮದಲ್ಲಿ ಮಾಡಿದ ಪುಣ್ಯದ ಫಲವಾಗಿದೆ ಎಂದು ಹೇಮಂತ್ ಸಂಪಾಜೆ ಹೇಳಿದರು.

ವಿವೇಕಾನಂದ ನಗರದ ನಾಗಮ್ಮ ಕಲ್ಯಾಣ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನೂರಾರು ಮಾಜಿ ಸೈನ್ಯಾಧಿಕಾರಿಗಳು, ಮಾಜಿ ಸೈನಿಕರು, ಕುಟುಂಬ ಸದಸ್ಯರು ಪಾಲ್ಗೊಂಡಿದ್ದರು. ಇದೇ ವೇಳೆ ಸೇನೆಯಲ್ಲಿ ಸೇವೆ ಸಲ್ಲಿಸಿ ಅತ್ಯುತ್ತಮ ಸಾಧನೆಗೈದ ಹತ್ತು ಮಂದಿ ಸೈನಿಕರಿಗೂ ‘ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ವೇದಿಕೆಯಲ್ಲಿ ಅಖಿಲ ಕರ್ನಾಟಕ ಮಾಜಿ ಸೈನಿಕ ಸಂಘ ಮೈಸೂರು ಘಟಕದ ಜಿಲ್ಲಾಧ್ಯಕ್ಷ ಕೆ.ಪಿ.ದಿವಾಕರ್, ಮಾಜಿ ಸೈನಿಕರ ಸಂಘದ ಪ್ರಧಾನ ಕಾರ್ಯದರ್ಶಿ ನಂಜುಂಡಸ್ವಾಮಿ, ಜಂಟಿ ಕಾರ್ಯದರ್ಶಿ ಧರ್ಮೇಂದ್ರ ಬಿ.ಕೆ, ಸಹ ಕಾರ್ಯದರ್ಶಿ ದೇವರಾಜು ಡಿ.ಬಿ., ಸಂಘಟನಾ ಕಾರ್ಯದರ್ಶಿ ರವೀಂದ್ರ ಕುಮಾರ್, ಖಜಾಂಚಿ ಜೀವನ್, ಲಾಲೂ ಕುಮಾರ್ ಕಡ್ಯದ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು