ಇತ್ತೀಚಿನ ಸುದ್ದಿ
ರಾಹುಲ್ ಗಾಂಧಿ ಇಂದು ರಾಜ್ಯಕ್ಕೆ: ಮಂಡ್ಯ, ಕೋಲಾರದಲ್ಲಿ ಚುನಾವಣಾ ಪ್ರಚಾರ
17/04/2024, 09:27
ಬೆಂಗಳೂರು(reporterkarnataka.com): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಮಂಡ್ಯ ಮತ್ತು ಕೋಲಾರದಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ.
ರಾಹುಲ್ ಅವರು ಮಧ್ಯಾಹ್ನ 1.20ಕ್ಕೆ ಬೆಂಗಳೂರಿನ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸುವರು. 2..10ಕ್ಕೆ ಮಂಡ್ಯದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಲಿರುವರು. ಸಂಜೆ 4 ಗಂಟೆಗೆ ಕೋಲಾರದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸುವರು. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪರ್ಧಿಸುತ್ತಿರುವ ಮಂಡ್ಯ ಕ್ಷೇತ್ರ ರಾಜ್ಯದ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದಾಗಿದೆ.