11:31 PM Friday26 - April 2024
ಬ್ರೇಕಿಂಗ್ ನ್ಯೂಸ್
ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು ನಂಜನಗೂಡಿನಲ್ಲಿ ಶಾಂತಿಯುತ ಚುನಾವಣೆ: ಸಂಜೆ 4ಕ್ಕೆ ಸುಮಾರು ಶೇ.65 ಮತದಾನ ಸ್ಪೀಕರ್ ಖಾದರ್ ಆಪ್ತ ಸಹಾಯಕ ಮಹಮ್ಮದ್ ಲಿಬ್ಝೆತ್ ಮತದಾನ ; ಪದ್ಮರಾಜ್ ಗೆಲುವಿನ… ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್…

ಇತ್ತೀಚಿನ ಸುದ್ದಿ

ರಾಜಕೀಯ ಕೂಡ ಕ್ರಿಕೆಟ್ ತರಹ; ಆದರೆ, ಇಲ್ಲಿ ಬಾಲ್ ಎಲ್ಲಿಂದ ಬರುತ್ತೆ ಎನ್ನುವುದೇ ಗೊತ್ತಾಗೊಲ್ಲ: ಸ್ಪೀಕರ್ ಯು.ಟಿ. ಖಾದರ್ ಚಟಾಕಿ

06/01/2024, 12:41

ಮಂಗಳೂರು(reporterkarnataka.com): ರಾಜಕೀಯ‌ ಕೂಡ ಕ್ರಿಕೆಟ್ ಆಟದಂತೆ. ನೈಜ ಕ್ರಿಕೆಟ್ ನಲ್ಲಿ ಬಾಲ್ ಎಲ್ಲಿಂದ ಬರುತ್ತದೆ ಎಂದು ಗೊತ್ತಾಗುತ್ತದೆ. ಆದರೆ ರಾಜಕೀಯ ಕ್ರಿಕೆಟ್ ನಲ್ಲಿ ಬಾಲ್ ಎಲ್ಲಿಂದ ಬರುತ್ತೆ ಎನ್ನುವುದೇ ಗೊತ್ತಾಗೊಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಾರ್ಮಿಕವಾಗಿ ನುಡಿದರು.
ನಗರದ ಹೊರವಲಯದ ಅಡ್ಯಾರ್‌ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಕೆಯುಡಬ್ಲ್ಯೂಜೆ ರಾಜ್ಯ ಮಟ್ಟದ ಬ್ರ್ಯಾಂಡ್‌ ಮಂಗಳೂರು ರೋಹನ್‌ ಕಪ್‌-2024
ಕ್ರಿಕೆಟ್‌ ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಾಮಾಜಿಕ ಹೊಣೆಗಾರಿಕೆ ಅರಿತು ಪತ್ರಕರ್ತರು ಕಾರ್ಯನಿರ್ವಹಿಸಬೇಕು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿದೆ.
ಬ್ರ್ಯಾಂಡ್‌ ಮಂಗಳೂರು ಸ್ಲೋಗನ್‌ ಮೂಲಕ ಇಲ್ಲಿನ ಪತ್ರಕರ್ತರು ಕರಾವಳಿಯ ರಾಯಭಾರಿಗಳಾಗಿದ್ದಾರೆ. ಪತ್ರಕರ್ತರ ಸಂಘಗಳ ಅನ್ಯೋನ್ಯ ಚಟುವಟಿಕೆಗಳಿಗೆ ಎಲ್ಲರಿಗೂ ಮಾದರಿಯಾಗಿದ್ದು, ಇದು ಸಾಮಾಜಿಕ ಹಿತಾಸಕ್ತಿಯನ್ನು ಬೆಳೆಸಲು ಸಹಕಾರಿಯಾಗಿದೆ ಎಂದು ಶ್ಲಾಘಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು