1:35 PM Wednesday29 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ರಾಜ್ಯ ಬಿಜೆಪಿ ಬಿಕ್ಕಟ್ಟು ಶಮನ ಹೊಣೆಗಾರಿಕೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೆಗಲಿಗೆ?: ರಾಜ್ಯಾಧ್ಯಕ್ಷರ ಬದಲಾವಣೆ ಕುರಿತೂ ಚರ್ಚೆ?

02/07/2023, 14:11

ಬೆಂಗಳೂರು (reporterkarnataka.com): ವಿಧಾನಸಭೆ ಚುನಾವಣೆ ಸೋಲಿನ ಬಳಿಕ ರಾಜ್ಯ ಬಿಜೆಪಿಯಲ್ಲಿ ಉದ್ಬವಿಸಿರುವ ಸಂಘರ್ಷವನ್ನು ಪರಿಹಾರಗೊಳಿಸುವ ನಿಟ್ಟಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ದೆಹಲಿಗೆ ಕರೆಸಿದ್ದು, ಪಕ್ಷದೊಳಗಿನ ಬಿಕ್ಕಟ್ಟು ಶಮನಗೊಳಿಸುವ ಹೊಣೆಗಾರಿಕೆಯನ್ನು ಅವರಿಗೆ ವಹಿಸುವ ಸಾಧ್ಯತೆಗಳಿವೆ.
ರಾಜ್ಯ ವಿಧಾನ ಮಂಡಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ವಿಧಾನಸಭೆ ಪ್ರತಿಪಕ್ಷದ ನಾಯಕನ ಆಯ್ಕೆ ಇನ್ನೂ ನಡೆದಿಲ್ಲ. ಪಕ್ಷದ ಸೋಲಿನ ಪರಾಮರ್ಶೆ ಸಭೆಯು ಪರಸ್ಪರ ಕಿತ್ತಾಟದ ಸಭೆಯಾಗಿ ಮಾರ್ಪಟ್ಟ ಹಿನ್ನೆಲೆಯಲ್ಲಿ ಇಷ್ಟರವರೆಗೆ ಮೌನವಾಗಿದ್ದ ಹೈಕಮಾಂಡ್ ಎಚ್ಚೆತ್ತುಕೊಂಡಿದೆ. ರಾಜ್ಯ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಸಿ ಮಾತುಕತೆಗೆ ಒಲವು ತೋರಿಸಿದೆ. ಯಡಿಯೂರಪ್ಪ ಇಲ್ಲದೆ ರಾಜ್ಯದಲ್ಲಿ ಬಿಜೆಪಿ ಅಸ್ತಿತ್ವ ಉಳಿಸಿಕೊಳ್ಳುವುದು ಕಷ್ಟ ಎಂಬುದನ್ನು ಹೈಕಮಾಂಡ್ ಗೆ ಮನವರಿಕೆಯಾಗಿದೆ ಎಂದು ಮೂಲಗಳು ತಿಳಿಸಿವೆ.
ಶಾಸಕಾಂಗ ಪಕ್ಷದ ನಾಯಕ ಮತ್ತು ಪಕ್ಷದ ರಾಜ್ಯಾಧ್ಯಕ್ಷ ವಿಚಾರದಲ್ಲಿ ತೀವ್ರಗೊಂಡಿರುವ ಭಿನ್ನಮತವನ್ನು ಶಮನಗೊಳಿಸುವ ನಿಟ್ಟಿನಲ್ಲಿ ಚರ್ಚಿಸಲು ಪಕ್ಷದ ವರಿಷ್ಠರು
ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಸಿದ್ದಾರೆ. ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ, ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗುವ ಸಾಧ್ಯತೆಗಳಿವೆ. ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಭಿನ್ನಮತವನ್ನು ಶಮನಗೊಳಿಸುವ ಹೊಣೆಯನ್ನು ಯಡಿಯೂರಪ್ಪ ಅವರಿಗೆ ವರಿಷ್ಠರು ವಹಿಸುವ ಸಾಧ್ಯತೆಗಳಿವೆ. ಪಕ್ಷದ ಹೈಕಮಾಂಡ್‌ ಕರೆದಿರುವ ಹಿನ್ನೆಲೆಯಲ್ಲಿ ಭಾನುವಾರ ದೆಹಲಿಗೆ ತೆರಳುತ್ತಿರುವ ಯಡಿಯೂರಪ್ಪ ಅವರು,
ಭಾನುವಾರ ದೆಹಲಿಯಲ್ಲೇ ಉಳಿದುಕೊಂಡು ಸೋಮವಾರ ಹಿಂತಿರುಗಲಿದ್ದಾರೆ. ಪಕ್ಷದ ಮೇಲೆ ಗಟ್ಟಿಯಾದ ಹಿಡಿತ ಹೊಂದಿರುವ ಯಡಿಯೂರಪ್ಪ ಮೂಲಕ ಅಸಮಾಧಾನಗೊಂಡ ನಾಯಕರನ್ನು ಸುಮ್ಮನಿರಿಸಲು ಬಿಜೆಪಿ ಹೈಕಮಾಂಡ್‌ ನಿರ್ಧರಿಸಿದೆ. ಸೋಮವಾರದಿಂದ ಹೊಸ ಸರ್ಕಾರದ ಮೊದಲ ಅಧಿವೇಶನ ಪ್ರಾರಂಭವಾಗುತ್ತಿದೆ. ಸದನದಲ್ಲಿ ಸರ್ಕಾರದ ವಿರುದ್ಧ ಟೀಕಾ-ಪ್ರಹಾರ ನಡೆಸುವ ಮತ್ತು ಪಕ್ಷವನ್ನು ಸದನದಲ್ಲಿ ಮುನ್ನಡೆಸುವ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಯಾಗಿಲ್ಲ. ಅಲ್ಲದೇ, ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಹೈಕಮಾಂಡ್ ಯಡಿಯೂರಪ್ಪ ಅವರ ಜತೆ ಚರ್ಚಿಸಲಿದೆ ಎಂಬ ಮಾಹಿತಿ ರಿಪೋರ್ಟರ್ ಕರ್ನಾಟಕಕ್ಕೆ ಲಭ್ಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು