9:21 AM Monday20 - April 2026
ಬ್ರೇಕಿಂಗ್ ನ್ಯೂಸ್
ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಆ.15ರ ಬಳಿಕ ಕಠಿಣ ನಿಯಮ ಜಾರಿ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಸುಳಿವು

13/08/2021, 15:23

ಉಡುಪಿ (reporterkarnataka.com): ರಾಜ್ಯದಲ್ಲಿ ಕೊರೊನಾ ಸೋಂಕು ಚಿಕ್ಕ ಮಕ್ಕಳಲ್ಲಿ ಕೂಡ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರ ಬಳಿಕ ಟಫ್ ರೂಲ್ಸ್ ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಸಿಎಂ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿಗೆ ತೆರಳಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ತಜ್ಞರ ಸಲಹೆಯಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದಾಗಿ ಹೇಳಿದ್ದಾರೆ.

ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಹೆಚ್ಚು ಕಂಡು ಬಂದರೆ ಬೆಂಗಳೂರಿನಲ್ಲಿ ಬಿಗಿಕ್ರಮ ಕೈಗೊಳ್ಳಲಾಗುವುದು. ಕಳೆದ 40 ದಿನಗಳಿಂದ 400ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಮಕ್ಕಳಲ್ಲಿ ಕೂಡ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಆ.15ರ ಬಳಿಕ ಕಠಿಣ ನಿಯಮ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು