10:43 AM Saturday14 - March 2026
ಬ್ರೇಕಿಂಗ್ ನ್ಯೂಸ್
ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಆ.15ರ ಬಳಿಕ ಕಠಿಣ ನಿಯಮ ಜಾರಿ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಸುಳಿವು

13/08/2021, 15:23

ಉಡುಪಿ (reporterkarnataka.com): ರಾಜ್ಯದಲ್ಲಿ ಕೊರೊನಾ ಸೋಂಕು ಚಿಕ್ಕ ಮಕ್ಕಳಲ್ಲಿ ಕೂಡ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರ ಬಳಿಕ ಟಫ್ ರೂಲ್ಸ್ ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಸಿಎಂ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿಗೆ ತೆರಳಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ತಜ್ಞರ ಸಲಹೆಯಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದಾಗಿ ಹೇಳಿದ್ದಾರೆ.

ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಹೆಚ್ಚು ಕಂಡು ಬಂದರೆ ಬೆಂಗಳೂರಿನಲ್ಲಿ ಬಿಗಿಕ್ರಮ ಕೈಗೊಳ್ಳಲಾಗುವುದು. ಕಳೆದ 40 ದಿನಗಳಿಂದ 400ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಮಕ್ಕಳಲ್ಲಿ ಕೂಡ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಆ.15ರ ಬಳಿಕ ಕಠಿಣ ನಿಯಮ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು