2:59 PM Sunday23 - November 2025
ಬ್ರೇಕಿಂಗ್ ನ್ಯೂಸ್
Chikkamagaluru | ಎನ್.ಆರ್.ಪುರ: ರಾಜ್ಯ ಹೆದ್ದಾರಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ; ಜನರಲ್ಲಿ ಮತ್ತೆ… ಸಿದ್ದರಾಮಯ್ಯರ ಹಣಕಾಸು ಮಂತ್ರಿ ಮಾಡಿದ್ದೇ ನಾನು: ಸಿಎಂ ವಿರುದ್ದ ಮಾಜಿ ಪಿಎಂ ದೇವೇಗೌಡ… ಮೆಕ್ಕೆಜೋಳ ಖರೀದಿ-ಆಮದು ಬಗ್ಗೆ ಹಸಿ ಹಸಿ ಸುಳ್ಳು ಹೇಳುತ್ತಿದ್ದಾರೆ ಸಿಎಂ: ಕೇಂದ್ರ ಸಚಿವ… ರಾಜ್ಯಕ್ಕೆ ಯಾರು ಮುಖ್ಯಮಂತ್ರಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ ಸ್ಪಷ್ಟವಾಗಿ ತಿಳಿಸಲಿ: ಪ್ರತಿಪಕ್ಷ ನಾಯಕ… ಕೇರಳದಿಂದ ಮಡಿಕೇರಿಗೆ ಅಕ್ರಮ ಕೆಂಪು ಕಲ್ಲು ಸಾಗಾಟ: ಸುಳ್ಯ ಪೊಲೀಸರಿಂದ ಲಾರಿ ವಶ ಡಿಕೆಶಿ ಮುಖ್ಯಮಂತ್ರಿ ಆಗಲಿ ಎಂದು 91 ಕೆಜಿ ಎಳ್ಳಿನ ತುಲಾಭಾರ: ಪಾವಗಡದಲ್ಲಿ ಅಭಿಮಾನಿಗಳ… ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರಕಾರ ಸಿದ್ಧವಿದೆ: ಸಿಎಂ ಸಿದ್ದರಾಮಯ್ಯ ಘೋಷಣೆ ಮಂಡ್ಯ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಸಚಿನ್ ಚಲುವರಾಯಸ್ವಾಮಿ ಆಯ್ಕೆ ಅರಣ್ಯ ಪ್ರದೇಶದಿಂದ ಅಕ್ರಮವಾಗಿ ಮಣ್ಣು ಸಾಗಾಟ: ಸ್ಥಳೀಯರ ತೀವ್ರ ಆಕ್ಷೇಪ; ಮೌನ ವಹಿಸಿದ… ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಆ.15ರ ಬಳಿಕ ಕಠಿಣ ನಿಯಮ ಜಾರಿ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಸುಳಿವು

13/08/2021, 15:23

ಉಡುಪಿ (reporterkarnataka.com): ರಾಜ್ಯದಲ್ಲಿ ಕೊರೊನಾ ಸೋಂಕು ಚಿಕ್ಕ ಮಕ್ಕಳಲ್ಲಿ ಕೂಡ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರ ಬಳಿಕ ಟಫ್ ರೂಲ್ಸ್ ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಸಿಎಂ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿಗೆ ತೆರಳಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ತಜ್ಞರ ಸಲಹೆಯಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದಾಗಿ ಹೇಳಿದ್ದಾರೆ.

ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಹೆಚ್ಚು ಕಂಡು ಬಂದರೆ ಬೆಂಗಳೂರಿನಲ್ಲಿ ಬಿಗಿಕ್ರಮ ಕೈಗೊಳ್ಳಲಾಗುವುದು. ಕಳೆದ 40 ದಿನಗಳಿಂದ 400ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಮಕ್ಕಳಲ್ಲಿ ಕೂಡ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಆ.15ರ ಬಳಿಕ ಕಠಿಣ ನಿಯಮ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು