6:24 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ರಥಬೀದಿ ವೆಂಕಟರಮಣ ದೇವಸ್ಥಾನ ರಸ್ತೆ ಹಾಗೂ ರಥಬೀದಿ ಮಹಮ್ಮಾಯಿ ದೇವಸ್ಥಾನ ರಸ್ತೆ ಬೀದಿ ದೀಪ ಉದ್ಘಾಟನೆ

15/03/2022, 22:11

ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿಯಡಿ ರಥಬೀದಿ ವೆಂಕಟರಮಣ ದೇವಸ್ಥಾನದ ರಸ್ತೆ ಹಾಗೂ ರಥಬೀದಿ ಮಹಮ್ಮಾಯಿ ದೇವಸ್ಥಾನ ರಸ್ತೆಗೆ ಬೀದಿ ದೀಪಗಳ ಅಳವಡಿಕೆ ಕಾಮಗಾರಿ ಪೂರ್ಣಗೊಂಡು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. 

ಈ ವೇಳೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಸ್ಥಾನಗಳ ರಸ್ತೆಯ ಅಭಿವೃದ್ಧಿ ಹಾಗೂ ಆಧುನಿಕ ವಿದ್ಯುತ್ ದೀಪಗಳ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇತ್ತೀಚೆಗೆ ಮಂಗಳಾದೇವಿ ದೇವಸ್ಥಾನದ ರಸ್ತೆ ಹಾಗೂ ಬೀದಿ ದೀಪಗಳನ್ನು ಉದ್ಘಾಟಿಸಲಾಗಿದೆ. ಹಾಗೆಯೇ ಮಹಮ್ಮಾಯಿ ದೇವಸ್ಥಾನ ರಸ್ತೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಬೀದಿ ದೀಪಗಳನ್ನು ಅಳವಡಿಸಲಾಗಿದೆ ಎಂದರು. 

ರಥಬೀದಿ ವೆಂಕಟರಮಣ ದೇವಸ್ಥಾನದಿಂದ ಶರವು ದೇವಸ್ಥಾನ ರಸ್ತೊ ಸಂಪರ್ಕಿಸುವ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ರಥಬೀದಿಯಲ್ಲಿ ಟೆಂಪಲ್‌ ಸ್ಕ್ವಾರ್ ಪರಿಕಲ್ಪನೆಯೊಂದಿಗೆ ಕ್ಷೇತ್ರದ ‌ಪರಿಸರವನ್ನು ಸ್ಮಾರ್ಟ್ ಆಗಿ ಪರಿವರ್ತಿಸಲಾಗಿದೆ ಎಂದರು. 

ಈ ಸಂದರ್ಭದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೋರೇಟರ್ ಪೂರ್ಣಿಮಾ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಲೀಲಾವತಿ ಪ್ರಕಾಶ್, ಕಾರ್ಪೊರೇಟರ್ ಶೈಲೇಶ್ ಶೆಟ್ಟಿ , ಉತ್ತರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಮೇಶ್ ಹೆಗ್ಡೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ರಾವ್,  ಮಹಾಮಾಯಿ ದೇವಸ್ಥಾನದ ಪ್ರಮುಖರಾದ ಸುರೇಶ್ ಕಾಮತ್ ಮತ್ತು ಗೋವಿಂದ ಪೈ  ಮತ್ತು 41ಸೆಂಟ್ರಲ್ ವಾರ್ಡಿನ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮುರುಳಿಧರ್ ನಾಯಕ್ ಹಾಗೂ ವಾರ್ಡಿನ  ಬೂತ್ ಅಧ್ಯಕ್ಷರಾದ ದೇವದಾಸ್  ನಾಗರ್ ಮಠ್ ,ಬಿಜೆಪಿ ಮುಖಂಡರಾದ ವಸಂತ್ ಜೆ ಪೂಜಾರಿ, ಪುಷ್ಪರಾಜ್ ಶೆಟ್ಟಿ, ರಾಜೇಂದ್ರ, ಉಮಾನಾಥ್ ಶೆಟ್ಟಿಗಾರ್, ಸೌಮ್ಯ ರೈ ,ಪಿ ಸಿ ಗುರು ,ನಮೃತಾ ನಾಗರ ಮಠ್, ಸತೀಶ್ ಮಲ್ಯ ಹಾಗೂ ಕಾರ್ಯಕರ್ತರಾದ ಗಿರೀಶ್, ಗಣೇಶ್ ನಾಯಕ್ ,ಕೇದರ್ ನಾಗರ್ ಮಟ್ ,ಸ್ಮಿತಾ ಕಾಮತಅಮಿತ್ ,ಸುರೇಂದ್ರ ಕುಡ್ವ ವಸಂತ್ ಪೂಜಾರಿ ,ಸಾಮಾಜಿಕ ಜಾಲತಾಣಪ್ರಮುಖರಾದ ನೀಲೇಶ್  ಕಾಮತ್, ಅಶ್ವಿತ್ ಕೊಟ್ಟಾರಿ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು