7:39 PM Saturday25 - October 2025
ಬ್ರೇಕಿಂಗ್ ನ್ಯೂಸ್
Bangaluru | ಪಿಡಿಪಿಎಸ್‌ಯಡಿ ಈರುಳ್ಳಿ ಖರೀದಿ ಪ್ರಯತ್ನ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ… Bangaluru | ರಾಜ್ಯ ಸರಕಾರಕ್ಕೆ ಕೆಎಸ್ ಡಿಎಲ್ ರಿಂದ 135 ಕೋಟಿ ಡಿವಿಡೆಂಡ್… ಬೆಂಗಳೂರು ಲಾಡ್ಜ್‌ನಲ್ಲಿ ಯುವತಿ ಜತೆ ತಂಗಿದ್ದ ಯುವಕನ ಸಾವಿಗೆ ಕಿಡ್ನಿ ವೈಫಲ್ಯ ಕಾರಣ:… ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ…

ಇತ್ತೀಚಿನ ಸುದ್ದಿ

ರಥಬೀದಿ ವೆಂಕಟರಮಣ ದೇವಸ್ಥಾನ ರಸ್ತೆ ಹಾಗೂ ರಥಬೀದಿ ಮಹಮ್ಮಾಯಿ ದೇವಸ್ಥಾನ ರಸ್ತೆ ಬೀದಿ ದೀಪ ಉದ್ಘಾಟನೆ

15/03/2022, 22:11

ಮಂಗಳೂರು(reporterkarnataka.com): ಸ್ಮಾರ್ಟ್ ಸಿಟಿಯಡಿ ರಥಬೀದಿ ವೆಂಕಟರಮಣ ದೇವಸ್ಥಾನದ ರಸ್ತೆ ಹಾಗೂ ರಥಬೀದಿ ಮಹಮ್ಮಾಯಿ ದೇವಸ್ಥಾನ ರಸ್ತೆಗೆ ಬೀದಿ ದೀಪಗಳ ಅಳವಡಿಕೆ ಕಾಮಗಾರಿ ಪೂರ್ಣಗೊಂಡು ಶಾಸಕ ವೇದವ್ಯಾಸ್ ಕಾಮತ್ ಅವರು ಉದ್ಘಾಟಿಸಿದರು. 

ಈ ವೇಳೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಪ್ರಮುಖ ದೇವಸ್ಥಾನಗಳ ರಸ್ತೆಯ ಅಭಿವೃದ್ಧಿ ಹಾಗೂ ಆಧುನಿಕ ವಿದ್ಯುತ್ ದೀಪಗಳ ಅಳವಡಿಕೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇತ್ತೀಚೆಗೆ ಮಂಗಳಾದೇವಿ ದೇವಸ್ಥಾನದ ರಸ್ತೆ ಹಾಗೂ ಬೀದಿ ದೀಪಗಳನ್ನು ಉದ್ಘಾಟಿಸಲಾಗಿದೆ. ಹಾಗೆಯೇ ಮಹಮ್ಮಾಯಿ ದೇವಸ್ಥಾನ ರಸ್ತೆಯ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಬೀದಿ ದೀಪಗಳನ್ನು ಅಳವಡಿಸಲಾಗಿದೆ ಎಂದರು. 

ರಥಬೀದಿ ವೆಂಕಟರಮಣ ದೇವಸ್ಥಾನದಿಂದ ಶರವು ದೇವಸ್ಥಾನ ರಸ್ತೊ ಸಂಪರ್ಕಿಸುವ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ರಥಬೀದಿಯಲ್ಲಿ ಟೆಂಪಲ್‌ ಸ್ಕ್ವಾರ್ ಪರಿಕಲ್ಪನೆಯೊಂದಿಗೆ ಕ್ಷೇತ್ರದ ‌ಪರಿಸರವನ್ನು ಸ್ಮಾರ್ಟ್ ಆಗಿ ಪರಿವರ್ತಿಸಲಾಗಿದೆ ಎಂದರು. 

ಈ ಸಂದರ್ಭದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ಸ್ಥಳೀಯ ಕಾರ್ಪೋರೇಟರ್ ಪೂರ್ಣಿಮಾ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಲೀಲಾವತಿ ಪ್ರಕಾಶ್, ಕಾರ್ಪೊರೇಟರ್ ಶೈಲೇಶ್ ಶೆಟ್ಟಿ , ಉತ್ತರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ರಮೇಶ್ ಹೆಗ್ಡೆ, ಮಹಿಳಾ ಮೋರ್ಚಾ ಅಧ್ಯಕ್ಷೆ ಶ್ರೀಮತಿ ಪೂರ್ಣಿಮಾ ರಾವ್,  ಮಹಾಮಾಯಿ ದೇವಸ್ಥಾನದ ಪ್ರಮುಖರಾದ ಸುರೇಶ್ ಕಾಮತ್ ಮತ್ತು ಗೋವಿಂದ ಪೈ  ಮತ್ತು 41ಸೆಂಟ್ರಲ್ ವಾರ್ಡಿನ ಶಕ್ತಿ ಕೇಂದ್ರದ ಅಧ್ಯಕ್ಷರಾದ ಮುರುಳಿಧರ್ ನಾಯಕ್ ಹಾಗೂ ವಾರ್ಡಿನ  ಬೂತ್ ಅಧ್ಯಕ್ಷರಾದ ದೇವದಾಸ್  ನಾಗರ್ ಮಠ್ ,ಬಿಜೆಪಿ ಮುಖಂಡರಾದ ವಸಂತ್ ಜೆ ಪೂಜಾರಿ, ಪುಷ್ಪರಾಜ್ ಶೆಟ್ಟಿ, ರಾಜೇಂದ್ರ, ಉಮಾನಾಥ್ ಶೆಟ್ಟಿಗಾರ್, ಸೌಮ್ಯ ರೈ ,ಪಿ ಸಿ ಗುರು ,ನಮೃತಾ ನಾಗರ ಮಠ್, ಸತೀಶ್ ಮಲ್ಯ ಹಾಗೂ ಕಾರ್ಯಕರ್ತರಾದ ಗಿರೀಶ್, ಗಣೇಶ್ ನಾಯಕ್ ,ಕೇದರ್ ನಾಗರ್ ಮಟ್ ,ಸ್ಮಿತಾ ಕಾಮತಅಮಿತ್ ,ಸುರೇಂದ್ರ ಕುಡ್ವ ವಸಂತ್ ಪೂಜಾರಿ ,ಸಾಮಾಜಿಕ ಜಾಲತಾಣಪ್ರಮುಖರಾದ ನೀಲೇಶ್  ಕಾಮತ್, ಅಶ್ವಿತ್ ಕೊಟ್ಟಾರಿ ಹಾಗೂ ಇನ್ನಿತರ ಕಾರ್ಯಕರ್ತರು ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು