11:20 AM Wednesday25 - March 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ ರಷ್ಯಾದಿಂದ ಮಂಗಳೂರಿಗೆ ಕಚ್ಚಾತೈಲ ತಂದ ಹಡಗು: ಅನ್‌ಲೋಡಿಂಗ್‌ ಆರಂಭ; ಎಂಆರ್‌ಪಿಎಲ್‌ಗೆ ರವಾನೆ ಶುರು ವಿರಾಜಪೇಟೆ ವಲಯ ಅರಣ್ಯ ವ್ಯಾಪ್ತಿಯ ಚೆಂಬೆಬೆಳ್ಳೂರು ಗ್ರಾಮದಲ್ಲಿ ಒಂಟಿ ಸಲಗ ಸೆರೆ ಕೈಗೆ ಕಂಟಕ? | ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿ ಸಾದಿಕ್…

ಇತ್ತೀಚಿನ ಸುದ್ದಿ

ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

07/03/2026, 21:43

ಮೈಸೂರು(reporterkarnataka.com): ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ಪಕ್ಷದ ಹೈಕಮಾಂಡ್ ಸೂಚನೆ ನೀಡಿದರೆ ನಾನು ತಕ್ಷಣವೇ ಸ್ಥಾನ ಬಿಟ್ಟುಕೊಡಲು ಸಿದ್ಧನಿದ್ದೇನೆ” ಎಂದು ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರದ ಬಗ್ಗೆ ತಮಗೆ ಯಾವುದೇ ವ್ಯಾಮೋಹವಿಲ್ಲ ಎಂಬುದನ್ನು ಪುನರುಚ್ಚರಿಸಿದರು. “ನಾನು ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುವ ಶಿಸ್ತಿನ ಸಿಪಾಯಿ. ಅವರು ಬಿಡು ಎಂದರೆ ಒಂದು ನಿಮಿಷವೂ ವಿಳಂಬ ಮಾಡದೆ ಬಿಟ್ಟುಬಿಡುತ್ತೇನೆ,” ಎಂದು ಮಾರ್ಮಿಕವಾಗಿ ಉತ್ತರಿಸಿದರು.
ವಿರೋಧ ಪಕ್ಷಗಳ ಟೀಕೆ ಹಾಗೂ ಪಕ್ಷದೊಳಗಿನ ಕೆಲವು ಬೆಳವಣಿಗೆಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ತಮ್ಮ ಮೇಲೆ ಹೈಕಮಾಂಡ್ ಸಂಪೂರ್ಣ ವಿಶ್ವಾಸ ಇಟ್ಟಿದೆ. ಹೈಕಮಾಂಡ್ ಆದೇಶವೇ ಅಂತಿಮ ಎಂದು ಸ್ಪಷ್ಟಪಡಿಸುವ ಮೂಲಕ ನಾಯಕತ್ವದ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

*ಬಜೆಟ್ ಮಂಡನೆಯ ವಿಶ್ವಾಸ:*
ಇದೇ ಸಂದರ್ಭದಲ್ಲಿ ತಮ್ಮ ಮುಂದಿನ ನಡೆಯ ಬಗ್ಗೆಯೂ ವಿಶ್ವಾಸ ವ್ಯಕ್ತಪಡಿಸಿದ ಸಿಎಂ, “ಈಗಾಗಲೇ ದಾಖಲೆಯ 17 ಬಜೆಟ್‌ಗಳನ್ನು ಮಂಡಿಸಿದ್ದೇನೆ. ಹೈಕಮಾಂಡ್ ಮತ್ತು ರಾಜ್ಯದ ಜನತೆ ಆಶೀರ್ವದಿಸಿದರೆ, ಮುಂದಿನ ಎರಡು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಇನ್ನೂ ಎರಡು ಬಜೆಟ್‌ಗಳನ್ನು ಮಂಡಿಸುವ ಆಸೆ ನನಗಿದೆ,” ಎಂದು ಹೇಳಿದರು.

*ಕೇಂದ್ರದ ಮೇಲೆ ವಾಗ್ದಾಳಿ:*
ರಾಜ್ಯದ ಹಣಕಾಸು ಪರಿಸ್ಥಿತಿಯನ್ನು ಸಮರ್ಥಿಸಿಕೊಂಡ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಸಾಲದ ನೀತಿಗಳನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ವಿತ್ತೀಯ ಕೊರತೆ ನಿಯಮದ ಮಿತಿಯಲ್ಲಿದೆ. ಆದರೆ ಕೇಂದ್ರದ ಸಾಲದ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದೆ ಎಂದು ಟೀಕಿಸಿದರು. ಇದರೊಂದಿಗೆ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸುವ ಪ್ರಸ್ತಾವನೆಯು ಮಕ್ಕಳ ಹಿತದೃಷ್ಟಿಯಿಂದ ಅನಿವಾರ್ಯ ಎಂದು ಅವರು ಪುನರುಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು