2:01 PM Sunday3 - May 2026
ಬ್ರೇಕಿಂಗ್ ನ್ಯೂಸ್
ಅಂಜನಾದ್ರಿ ದರ್ಶನಕ್ಕೆ ಹೊರಟಿದ್ದ ಭಕ್ತರ ವಾಹನದ ಟಯರ್ ಬ್ಲಾಸ್ಟ್: ಓರ್ವ ಸಾವು, 7… ಶೃಂಗೇರಿ ವಿಧಾನಸಭಾ ಕ್ಷೇತ್ರ: ಮರು ಮತ ಎಣಿಕೆಯಲ್ಲೂ ಕಾಂಗ್ರೆಸ್ ಶಾಸಕ ಟಿ.ಡಿ. ರಾಜೇಗೌಡಗೆ… ರಾಜ್ಯದಲ್ಲಿರುವ ಹೊರ ರಾಜ್ಯ ನೋಂದಣಿ ವಾಹನಗಳಿಗೆ ಹೊಸ ತೆರಿಗೆ: ಸುಗ್ರೀವಾಜ್ಞೆ ಜಾರಿ ಕೃಷಿ ಅಧಿಕಾರಿಗಳ ದಾಳಿ: ಅಕ್ರಮ ಯೂರಿಯಾ ದಾಸ್ತಾನು ಪತ್ತೆ; 399 ಬ್ಯಾಗ್ ರಸಗೊಬ್ಬರ… ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು 1.20 ಕೋಟಿ ರೂಪಾಯಿ ಮೌಲ್ಯದ ಬೆಳ್ಳಿ ಆಭರಣ,… Mangaluru | ಪರಪ್ಪನ ಅಗ್ರಹಾರ ಜೈಲ್ ನಲ್ಲಿ ಕೈದಿಯಿಂದ ಮೊಬೈಲ್ ನಲ್ಲೇ ಪತ್ನಿಯ… ಮಗಳ ಮದುವೆ ಸಾಲ ತೀರಿಸಲು ಅಳಿಯನ ಮನೆಗೆ ಅತ್ತೆ ಕನ್ನ: 110 ಗ್ರಾಂ… ಹೇಮಾವತಿ ನಾಲೆಗೆ ಉರುಳಿ ಬಿದ್ದ ಕಾರು: ತಾಯಿ- ಮಗು ಸಾವು; ಧರ್ಮಸ್ಥಳದಿಂದ ದೇವನಹಳ್ಳಿಗೆ… ಧಾರವಾಡದಲ್ಲಿ ಟಿಬೇಟಿಯನ್ ಬಿಕ್ಕು ಹತ್ಯೆ: ಬೇರೆ ಕಡೆ ಕೊಲೆ ಮಾಡಿ ಎಸೆದಿರುವ ಶಂಕೆ ಉದ್ಯೋಗ ಖಾತ್ರಿ ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿ ಸಾವು: ಬಿಸಿಲಿನ ತಾಪಮಾನಕ್ಕೆ…

ಇತ್ತೀಚಿನ ಸುದ್ದಿ

ಹೈಕಮಾಂಡ್ ಸೂಚಿಸಿದರೆ ಕ್ಷಣಾರ್ಧದಲ್ಲಿ ಕುರ್ಚಿ ಬಿಡಲು ಸಿದ್ಧ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

07/03/2026, 21:43

ಮೈಸೂರು(reporterkarnataka.com): ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ಪಕ್ಷದ ಹೈಕಮಾಂಡ್ ಸೂಚನೆ ನೀಡಿದರೆ ನಾನು ತಕ್ಷಣವೇ ಸ್ಥಾನ ಬಿಟ್ಟುಕೊಡಲು ಸಿದ್ಧನಿದ್ದೇನೆ” ಎಂದು ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿಕಾರದ ಬಗ್ಗೆ ತಮಗೆ ಯಾವುದೇ ವ್ಯಾಮೋಹವಿಲ್ಲ ಎಂಬುದನ್ನು ಪುನರುಚ್ಚರಿಸಿದರು. “ನಾನು ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುವ ಶಿಸ್ತಿನ ಸಿಪಾಯಿ. ಅವರು ಬಿಡು ಎಂದರೆ ಒಂದು ನಿಮಿಷವೂ ವಿಳಂಬ ಮಾಡದೆ ಬಿಟ್ಟುಬಿಡುತ್ತೇನೆ,” ಎಂದು ಮಾರ್ಮಿಕವಾಗಿ ಉತ್ತರಿಸಿದರು.
ವಿರೋಧ ಪಕ್ಷಗಳ ಟೀಕೆ ಹಾಗೂ ಪಕ್ಷದೊಳಗಿನ ಕೆಲವು ಬೆಳವಣಿಗೆಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ತಮ್ಮ ಮೇಲೆ ಹೈಕಮಾಂಡ್ ಸಂಪೂರ್ಣ ವಿಶ್ವಾಸ ಇಟ್ಟಿದೆ. ಹೈಕಮಾಂಡ್ ಆದೇಶವೇ ಅಂತಿಮ ಎಂದು ಸ್ಪಷ್ಟಪಡಿಸುವ ಮೂಲಕ ನಾಯಕತ್ವದ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

*ಬಜೆಟ್ ಮಂಡನೆಯ ವಿಶ್ವಾಸ:*
ಇದೇ ಸಂದರ್ಭದಲ್ಲಿ ತಮ್ಮ ಮುಂದಿನ ನಡೆಯ ಬಗ್ಗೆಯೂ ವಿಶ್ವಾಸ ವ್ಯಕ್ತಪಡಿಸಿದ ಸಿಎಂ, “ಈಗಾಗಲೇ ದಾಖಲೆಯ 17 ಬಜೆಟ್‌ಗಳನ್ನು ಮಂಡಿಸಿದ್ದೇನೆ. ಹೈಕಮಾಂಡ್ ಮತ್ತು ರಾಜ್ಯದ ಜನತೆ ಆಶೀರ್ವದಿಸಿದರೆ, ಮುಂದಿನ ಎರಡು ವರ್ಷಗಳ ಕಾಲ ನಾನೇ ಮುಖ್ಯಮಂತ್ರಿಯಾಗಿ ಇನ್ನೂ ಎರಡು ಬಜೆಟ್‌ಗಳನ್ನು ಮಂಡಿಸುವ ಆಸೆ ನನಗಿದೆ,” ಎಂದು ಹೇಳಿದರು.

*ಕೇಂದ್ರದ ಮೇಲೆ ವಾಗ್ದಾಳಿ:*
ರಾಜ್ಯದ ಹಣಕಾಸು ಪರಿಸ್ಥಿತಿಯನ್ನು ಸಮರ್ಥಿಸಿಕೊಂಡ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಸಾಲದ ನೀತಿಗಳನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ವಿತ್ತೀಯ ಕೊರತೆ ನಿಯಮದ ಮಿತಿಯಲ್ಲಿದೆ. ಆದರೆ ಕೇಂದ್ರದ ಸಾಲದ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದೆ ಎಂದು ಟೀಕಿಸಿದರು. ಇದರೊಂದಿಗೆ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಿಸುವ ಪ್ರಸ್ತಾವನೆಯು ಮಕ್ಕಳ ಹಿತದೃಷ್ಟಿಯಿಂದ ಅನಿವಾರ್ಯ ಎಂದು ಅವರು ಪುನರುಚ್ಚರಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು