7:36 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಸಾಹಿತಿ ಡಾ. ಸಿ. ಸೋಮಶೇಖರ್ ಅವರ ‘ನೀನೊಲಿದ ಬದುಕು’ ಆತ್ಮಕಥೆ ಲೋಕಾರ್ಪಣೆ

22/02/2023, 00:03

ಮಂಗಳೂರು(reporterkarnataka.com): ಜೀವನಾನುಭವದ ಜೊತೆ ಆತ್ಮವಿಶ್ವಾಸ ಮತ್ತು ಆತ್ಮಸ್ಥೆ ರ್ಯ ಅಗತ್ಯ ಎಂದು ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದಭಾರತೀ ಸ್ವಾಮೀಜಿ ಹೇಳಿದರು.


ಕಲ್ಕೂರ ಪ್ರತಿಷ್ಠಾನ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ದ.ಕ. ಜಿಲ್ಲಾ ಸಮಿತಿ, ಸ್ನಾತಕೋತ್ತರ ತುಳು ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಆಶ್ರಯದಲ್ಲಿ ನಗರದ ವಿ.ವಿ. ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳವಾರ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಮತ್ತು ಸಾಹಿತಿ ಡಾ. ಸಿ. ಸೋಮಶೇಖರ ಅವರ ‘ನೀನೊಲಿದ ಬದುಕು’ ಆತ್ಮಕಥನ ಲೋಕಾರ್ಪಣಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.


ಸೋಮಶೇಖರ್ ಅವರು ಕೃತಿಯನ್ನು ಈಗಾಗಲೇ ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದ್ದಾರೆ. ಇದೀಗ ದ.ಕ. ಜಿಲ್ಲೆಯ ಬಗ್ಗೆ ಅವರಿಗಿರುವ ಅಭಿಮಾನದಿಂದ ಇಲ್ಲಿ ಮತ್ತೊಮ್ಮೆ ಲೋಕಾರ್ಪಣೆಗೊಳಿಸುತ್ತಿದ್ದಾರೆ. ಸೋಮಶೇಖರ್ ಅವರು ಅಧಿಕಾರಿಯಾಗಿ ದಕ್ಷತೆಯಿಂದ ತಮ್ಮ ಕೆಲಸಕ್ಕೆ ನ್ಯಾಯ ಒದಗಿಸಿದ್ದಾರೆ. ಪ್ರಾಧಿಕಾರದ ಮೂಲಕ ಕಾಸರಗೋಡು ಜಿಲ್ಲೆಯಲ್ಲಿ ಜನಪರ ಕರ್ತವ್ಯ ನಿರ್ವಹಿಸಿದ್ದಾರೆ. ಕಾಸರಗೋಡು ಕನ್ನಡಿಗರಿಗೆ ಆಗುವ ಅನ್ಯಾಯಗಳ ವಿರುದ್ದ ಸ್ಪಂದಿಸಿ ಪರಿಹಾರ ಕಂಡುಕೊಂಡಿದ್ದಾರೆ ಎಂದು ತಿಳಿಸಿದರು.


ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ದ.ಕ.ಜಿಲ್ಲಾ
ಜಾನಪದ ಅಕಾಡೆಮಿ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲಬೈಲ್, ವಿ.ವಿ. ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ. ಲಕ್ಷ್ಮಿದೇವಿ ಎಲ್., ಎ.ಆರ್. ಸುಬ್ಬಯ್ಯಕಟ್ಟೆ ಸೇರಿದಂತೆ ಮತ್ತಿತರರು ಇದ್ದರು.

ಹಿರಿಯ ಸಾಹಿತಿ ಮತ್ತು ವಿಶ್ರಾಂತ ಕುಲಪತಿ ಪ್ರೊ| ಬಿ.ಎ. ವಿವೇಕ ರೈ ಅವರು ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಡಾ| ಸಿ. ಸೋಮಶೇಖರ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಪ್ರಸ್ತಾವನೆಗೈದರು. ದ.ಕ.ಜಿ.ಪಂ. ಸಿಇಒ ಡಾ| ಕುಮಾರ್ ಕೃತಿ ಪರಿಚಯಿಸಿದರು.


ಮಂಗಳೂರು ವಿ.ವಿ. ಸ್ನಾತಕೋತ್ತರ ತುಳು ವಿಭಾಗ ಸಂಯೋಜಕ ಡಾ| ಮಾಧವ ಎಂ.ಕೆ. ಸ್ವಾಗತಿಸಿ, ಉಪನ್ಯಾಸಕಿ ಜಯಲಕ್ಷ್ಮಿ ಶೆಟ್ಟಿ ವಂದಿಸಿದರು. ಡಾ| ಪ್ರಿಯಾ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು