6:47 PM Wednesday8 - April 2026
ಬ್ರೇಕಿಂಗ್ ನ್ಯೂಸ್
ಎಲ್ಲ ಕಡೆ ಸಿದ್ದರಾಮಯ್ಯ ಬೇಕು ಎಂಬ ಬೇಡಿಕೆಯಿದೆ; ಕುಮಾರಸ್ವಾಮಿನಾ ಯಾರು ಎಂದು ಕೇಳ್ತಾರೆ:… ರಾಜ್ಯದಲ್ಲಿ ಬ್ಯಾನ್​​ ಆಗುತ್ತಾ ಸೋಲೋ ಟ್ರೆಕ್ಕಿಂಗ್?: ಅನುಭವವಿದ್ದರೂ ಅಪಾಯ ಫಿಕ್ಸ್​​; ಯಾಕೆ ಗೊತ್ತಾ? ಕೊಡಗಿನ ಅಳಿಯನಿಗೆ ಭರ್ಜರಿ ಪಾರ್ಟಿ: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ತವರಿನಲ್ಲಿ ಅದ್ದೂರಿ… ಎನ್.ಆರ್.ಪುರ: ಶಿವಮೊಗ್ಗದ ನರ್ಸ್ ಆತ್ಮಹತ್ಯೆ; ಹೊಳೆಗೆ ಹಾರಿ ಜೀವತ್ಯಾಗ Kodagu | ನಟಿ ರಶ್ಮಿಕಾ ಮಂದಣ್ಣಗೆ ತಂದೆಯಿಂದ ವಿರಾಜಪೇಟೆಯ “ಸೆರಿನಿಟಿ ಕಾಟೇಜ್” ಗಿಫ್ಟ್ ಮಧ್ಯಪ್ರಾಚ್ಯ ಯುದ್ಧ: ಕೊಡಗಿನಲ್ಲಿ ಸಿಲುಕಿದ ಇರಾನಿ ದಂಪತಿ; ಪಾಸ್‌ಪೋರ್ಟ್ ಆತಂಕ ಬಾಗಲಕೋಟೆ ಉಪ ಚುನಾವಣೆ | ಬಿಜೆಪಿ ಅಭ್ಯರ್ಥಿ ವಿರುದ್ಧ ಕರಪತ್ರ ಹಂಚಿಕೆ: ಇಬ್ಬರು… ಮುಖ್ಯಮಂತ್ರಿ ಸಿದ್ದರಾಮಯ್ಯ ನಿದ್ದೆಗೆಡಿಸಿದ ಉಪ ಚುನಾವಣೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ Bangalore | ಅಡುಗೆ ಅನಿಲ ದಾಸ್ತಾನು ಕೊರತೆ ಇಲ್ಲ: ವದಂತಿಗಳಿಗೆ ಕಿವಿಗೊಡಬೇಡಿ: ಡಿಸಿ… ಮಂಜೇಶ್ವರ ದಲ್ಲಿ ಸಿದ್ದರಾಮಯ್ಯ ಅಬ್ಬರದ ಪ್ರಚಾರ | ಪ್ರಧಾನಿ ಮೋದಿ ಅವರಿಂದ ಆಹಾರ…

ಇತ್ತೀಚಿನ ಸುದ್ದಿ

ಸಾಹಿತಿ ಡಾ. ಸಿ. ಸೋಮಶೇಖರ್ ಅವರ ‘ನೀನೊಲಿದ ಬದುಕು’ ಆತ್ಮಕಥೆ ಲೋಕಾರ್ಪಣೆ

22/02/2023, 00:03

ಮಂಗಳೂರು(reporterkarnataka.com): ಜೀವನಾನುಭವದ ಜೊತೆ ಆತ್ಮವಿಶ್ವಾಸ ಮತ್ತು ಆತ್ಮಸ್ಥೆ ರ್ಯ ಅಗತ್ಯ ಎಂದು ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದಭಾರತೀ ಸ್ವಾಮೀಜಿ ಹೇಳಿದರು.


ಕಲ್ಕೂರ ಪ್ರತಿಷ್ಠಾನ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ದ.ಕ. ಜಿಲ್ಲಾ ಸಮಿತಿ, ಸ್ನಾತಕೋತ್ತರ ತುಳು ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಆಶ್ರಯದಲ್ಲಿ ನಗರದ ವಿ.ವಿ. ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳವಾರ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಮತ್ತು ಸಾಹಿತಿ ಡಾ. ಸಿ. ಸೋಮಶೇಖರ ಅವರ ‘ನೀನೊಲಿದ ಬದುಕು’ ಆತ್ಮಕಥನ ಲೋಕಾರ್ಪಣಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.


ಸೋಮಶೇಖರ್ ಅವರು ಕೃತಿಯನ್ನು ಈಗಾಗಲೇ ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದ್ದಾರೆ. ಇದೀಗ ದ.ಕ. ಜಿಲ್ಲೆಯ ಬಗ್ಗೆ ಅವರಿಗಿರುವ ಅಭಿಮಾನದಿಂದ ಇಲ್ಲಿ ಮತ್ತೊಮ್ಮೆ ಲೋಕಾರ್ಪಣೆಗೊಳಿಸುತ್ತಿದ್ದಾರೆ. ಸೋಮಶೇಖರ್ ಅವರು ಅಧಿಕಾರಿಯಾಗಿ ದಕ್ಷತೆಯಿಂದ ತಮ್ಮ ಕೆಲಸಕ್ಕೆ ನ್ಯಾಯ ಒದಗಿಸಿದ್ದಾರೆ. ಪ್ರಾಧಿಕಾರದ ಮೂಲಕ ಕಾಸರಗೋಡು ಜಿಲ್ಲೆಯಲ್ಲಿ ಜನಪರ ಕರ್ತವ್ಯ ನಿರ್ವಹಿಸಿದ್ದಾರೆ. ಕಾಸರಗೋಡು ಕನ್ನಡಿಗರಿಗೆ ಆಗುವ ಅನ್ಯಾಯಗಳ ವಿರುದ್ದ ಸ್ಪಂದಿಸಿ ಪರಿಹಾರ ಕಂಡುಕೊಂಡಿದ್ದಾರೆ ಎಂದು ತಿಳಿಸಿದರು.


ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ದ.ಕ.ಜಿಲ್ಲಾ
ಜಾನಪದ ಅಕಾಡೆಮಿ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲಬೈಲ್, ವಿ.ವಿ. ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ. ಲಕ್ಷ್ಮಿದೇವಿ ಎಲ್., ಎ.ಆರ್. ಸುಬ್ಬಯ್ಯಕಟ್ಟೆ ಸೇರಿದಂತೆ ಮತ್ತಿತರರು ಇದ್ದರು.

ಹಿರಿಯ ಸಾಹಿತಿ ಮತ್ತು ವಿಶ್ರಾಂತ ಕುಲಪತಿ ಪ್ರೊ| ಬಿ.ಎ. ವಿವೇಕ ರೈ ಅವರು ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಡಾ| ಸಿ. ಸೋಮಶೇಖರ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಪ್ರಸ್ತಾವನೆಗೈದರು. ದ.ಕ.ಜಿ.ಪಂ. ಸಿಇಒ ಡಾ| ಕುಮಾರ್ ಕೃತಿ ಪರಿಚಯಿಸಿದರು.


ಮಂಗಳೂರು ವಿ.ವಿ. ಸ್ನಾತಕೋತ್ತರ ತುಳು ವಿಭಾಗ ಸಂಯೋಜಕ ಡಾ| ಮಾಧವ ಎಂ.ಕೆ. ಸ್ವಾಗತಿಸಿ, ಉಪನ್ಯಾಸಕಿ ಜಯಲಕ್ಷ್ಮಿ ಶೆಟ್ಟಿ ವಂದಿಸಿದರು. ಡಾ| ಪ್ರಿಯಾ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು