4:21 PM Friday4 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಸಾಹಿತಿ ಡಾ. ಸಿ. ಸೋಮಶೇಖರ್ ಅವರ ‘ನೀನೊಲಿದ ಬದುಕು’ ಆತ್ಮಕಥೆ ಲೋಕಾರ್ಪಣೆ

22/02/2023, 00:03

ಮಂಗಳೂರು(reporterkarnataka.com): ಜೀವನಾನುಭವದ ಜೊತೆ ಆತ್ಮವಿಶ್ವಾಸ ಮತ್ತು ಆತ್ಮಸ್ಥೆ ರ್ಯ ಅಗತ್ಯ ಎಂದು ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದಭಾರತೀ ಸ್ವಾಮೀಜಿ ಹೇಳಿದರು.


ಕಲ್ಕೂರ ಪ್ರತಿಷ್ಠಾನ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ದ.ಕ. ಜಿಲ್ಲಾ ಸಮಿತಿ, ಸ್ನಾತಕೋತ್ತರ ತುಳು ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಆಶ್ರಯದಲ್ಲಿ ನಗರದ ವಿ.ವಿ. ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳವಾರ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಮತ್ತು ಸಾಹಿತಿ ಡಾ. ಸಿ. ಸೋಮಶೇಖರ ಅವರ ‘ನೀನೊಲಿದ ಬದುಕು’ ಆತ್ಮಕಥನ ಲೋಕಾರ್ಪಣಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.


ಸೋಮಶೇಖರ್ ಅವರು ಕೃತಿಯನ್ನು ಈಗಾಗಲೇ ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದ್ದಾರೆ. ಇದೀಗ ದ.ಕ. ಜಿಲ್ಲೆಯ ಬಗ್ಗೆ ಅವರಿಗಿರುವ ಅಭಿಮಾನದಿಂದ ಇಲ್ಲಿ ಮತ್ತೊಮ್ಮೆ ಲೋಕಾರ್ಪಣೆಗೊಳಿಸುತ್ತಿದ್ದಾರೆ. ಸೋಮಶೇಖರ್ ಅವರು ಅಧಿಕಾರಿಯಾಗಿ ದಕ್ಷತೆಯಿಂದ ತಮ್ಮ ಕೆಲಸಕ್ಕೆ ನ್ಯಾಯ ಒದಗಿಸಿದ್ದಾರೆ. ಪ್ರಾಧಿಕಾರದ ಮೂಲಕ ಕಾಸರಗೋಡು ಜಿಲ್ಲೆಯಲ್ಲಿ ಜನಪರ ಕರ್ತವ್ಯ ನಿರ್ವಹಿಸಿದ್ದಾರೆ. ಕಾಸರಗೋಡು ಕನ್ನಡಿಗರಿಗೆ ಆಗುವ ಅನ್ಯಾಯಗಳ ವಿರುದ್ದ ಸ್ಪಂದಿಸಿ ಪರಿಹಾರ ಕಂಡುಕೊಂಡಿದ್ದಾರೆ ಎಂದು ತಿಳಿಸಿದರು.


ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ದ.ಕ.ಜಿಲ್ಲಾ
ಜಾನಪದ ಅಕಾಡೆಮಿ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲಬೈಲ್, ವಿ.ವಿ. ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ. ಲಕ್ಷ್ಮಿದೇವಿ ಎಲ್., ಎ.ಆರ್. ಸುಬ್ಬಯ್ಯಕಟ್ಟೆ ಸೇರಿದಂತೆ ಮತ್ತಿತರರು ಇದ್ದರು.

ಹಿರಿಯ ಸಾಹಿತಿ ಮತ್ತು ವಿಶ್ರಾಂತ ಕುಲಪತಿ ಪ್ರೊ| ಬಿ.ಎ. ವಿವೇಕ ರೈ ಅವರು ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಡಾ| ಸಿ. ಸೋಮಶೇಖರ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಪ್ರಸ್ತಾವನೆಗೈದರು. ದ.ಕ.ಜಿ.ಪಂ. ಸಿಇಒ ಡಾ| ಕುಮಾರ್ ಕೃತಿ ಪರಿಚಯಿಸಿದರು.


ಮಂಗಳೂರು ವಿ.ವಿ. ಸ್ನಾತಕೋತ್ತರ ತುಳು ವಿಭಾಗ ಸಂಯೋಜಕ ಡಾ| ಮಾಧವ ಎಂ.ಕೆ. ಸ್ವಾಗತಿಸಿ, ಉಪನ್ಯಾಸಕಿ ಜಯಲಕ್ಷ್ಮಿ ಶೆಟ್ಟಿ ವಂದಿಸಿದರು. ಡಾ| ಪ್ರಿಯಾ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು