6:37 PM Sunday19 - July 2026
ಬ್ರೇಕಿಂಗ್ ನ್ಯೂಸ್
Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ… ಬಂಟ್ವಾಳ, ಬಾದಾಮಿ ಸಹಿತ ರಾಜ್ಯದ 4 ರೈಲು ನಿಲ್ದಾಣಗಳಿಗೆ ನ್ಯೂ ಲುಕ್: ಏರ್‌ಪೋರ್ಟ್… ಕೊಡಗಿನಲ್ಲಿ ಅಕ್ರಮ ಬೇಟೆಗಾರರ ಮೇಲೆ ಅರಣ್ಯ ಇಲಾಖೆ ಗುಂಡೇಟು: ಮಾಲು ಸಮೇತ ಇಬ್ಬರು… ವಿರಾಜಪೇಟೆ | ಬೇತ್ರಿ ಸೇತುವೆ ಮೇಲಿಂದ ಯುವತಿಯ ಕಾವೇರಿ ನದಿಗೆ ತಳ್ಳಿ ಕೊಲೆಗೆ… ಬೆಂಗಳೂರಿನಲ್ಲಿ ಘೋರ ದುರಂತ: ಹೋಟೆಲ್ ಲಿಫ್ಟ್ ನಲ್ಲಿ ತಲೆ ಸಿಲುಕಿ ಧಾರವಾಡ ಯುವಕ… ಮೂಡಿಗೆರೆ ಕಾಂಗ್ರೆಸ್ ನಲ್ಲಿ ಶೀತಲ ಸಮರ: ಚಿಕ್ಕಮಗಳೂರಿನಲ್ಲಿ ಭಿನ್ನಮತೀಯರ ಸಭೆ; ಶಾಸಕಿ ನಯನಾ… ಬಿಎಂಟಿಸಿ ಕಂಡಕ್ಟರ್ ಟಿಕೆಟ್ ಬ್ಯಾಗ್ ಕದ್ದ ಚಾಲಾಕಿ ಮಹಿಳೆ!: ನೋಡೋಕೆ ಸೈಲೆಂಟು, ಮಾಡಿದ…

ಇತ್ತೀಚಿನ ಸುದ್ದಿ

ಸಾಹಿತಿ ಡಾ. ಸಿ. ಸೋಮಶೇಖರ್ ಅವರ ‘ನೀನೊಲಿದ ಬದುಕು’ ಆತ್ಮಕಥೆ ಲೋಕಾರ್ಪಣೆ

22/02/2023, 00:03

ಮಂಗಳೂರು(reporterkarnataka.com): ಜೀವನಾನುಭವದ ಜೊತೆ ಆತ್ಮವಿಶ್ವಾಸ ಮತ್ತು ಆತ್ಮಸ್ಥೆ ರ್ಯ ಅಗತ್ಯ ಎಂದು ಕಾಸರಗೋಡು ಎಡನೀರು ಮಠದ ಶ್ರೀ ಸಚ್ಚಿದಾನಂದಭಾರತೀ ಸ್ವಾಮೀಜಿ ಹೇಳಿದರು.


ಕಲ್ಕೂರ ಪ್ರತಿಷ್ಠಾನ, ಕರ್ನಾಟಕ ಜಾನಪದ ಪರಿಷತ್ ಬೆಂಗಳೂರು ದ.ಕ. ಜಿಲ್ಲಾ ಸಮಿತಿ, ಸ್ನಾತಕೋತ್ತರ ತುಳು ಅಧ್ಯಯನ ವಿಭಾಗ, ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು ಆಶ್ರಯದಲ್ಲಿ ನಗರದ ವಿ.ವಿ. ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಮಂಗಳವಾರ ನಿವೃತ್ತ ಹಿರಿಯ ಐಎಎಸ್ ಅಧಿಕಾರಿ ಮತ್ತು ಸಾಹಿತಿ ಡಾ. ಸಿ. ಸೋಮಶೇಖರ ಅವರ ‘ನೀನೊಲಿದ ಬದುಕು’ ಆತ್ಮಕಥನ ಲೋಕಾರ್ಪಣಾ ಸಮಾರಂಭದಲ್ಲಿ ಅವರು ಆಶೀರ್ವಚನ ನೀಡಿದರು.


ಸೋಮಶೇಖರ್ ಅವರು ಕೃತಿಯನ್ನು ಈಗಾಗಲೇ ಮುಖ್ಯಮಂತ್ರಿಗಳು ಬಿಡುಗಡೆಗೊಳಿಸಿದ್ದಾರೆ. ಇದೀಗ ದ.ಕ. ಜಿಲ್ಲೆಯ ಬಗ್ಗೆ ಅವರಿಗಿರುವ ಅಭಿಮಾನದಿಂದ ಇಲ್ಲಿ ಮತ್ತೊಮ್ಮೆ ಲೋಕಾರ್ಪಣೆಗೊಳಿಸುತ್ತಿದ್ದಾರೆ. ಸೋಮಶೇಖರ್ ಅವರು ಅಧಿಕಾರಿಯಾಗಿ ದಕ್ಷತೆಯಿಂದ ತಮ್ಮ ಕೆಲಸಕ್ಕೆ ನ್ಯಾಯ ಒದಗಿಸಿದ್ದಾರೆ. ಪ್ರಾಧಿಕಾರದ ಮೂಲಕ ಕಾಸರಗೋಡು ಜಿಲ್ಲೆಯಲ್ಲಿ ಜನಪರ ಕರ್ತವ್ಯ ನಿರ್ವಹಿಸಿದ್ದಾರೆ. ಕಾಸರಗೋಡು ಕನ್ನಡಿಗರಿಗೆ ಆಗುವ ಅನ್ಯಾಯಗಳ ವಿರುದ್ದ ಸ್ಪಂದಿಸಿ ಪರಿಹಾರ ಕಂಡುಕೊಂಡಿದ್ದಾರೆ ಎಂದು ತಿಳಿಸಿದರು.


ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ದ.ಕ.ಜಿಲ್ಲಾ
ಜಾನಪದ ಅಕಾಡೆಮಿ ಅಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲಬೈಲ್, ವಿ.ವಿ. ಸಂಧ್ಯಾ ಕಾಲೇಜು ಪ್ರಾಂಶುಪಾಲ ಡಾ. ಲಕ್ಷ್ಮಿದೇವಿ ಎಲ್., ಎ.ಆರ್. ಸುಬ್ಬಯ್ಯಕಟ್ಟೆ ಸೇರಿದಂತೆ ಮತ್ತಿತರರು ಇದ್ದರು.

ಹಿರಿಯ ಸಾಹಿತಿ ಮತ್ತು ವಿಶ್ರಾಂತ ಕುಲಪತಿ ಪ್ರೊ| ಬಿ.ಎ. ವಿವೇಕ ರೈ ಅವರು ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಽಕಾರದ ಅಧ್ಯಕ್ಷ ಡಾ| ಸಿ. ಸೋಮಶೇಖರ ಅವರು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಪ್ರಸ್ತಾವನೆಗೈದರು. ದ.ಕ.ಜಿ.ಪಂ. ಸಿಇಒ ಡಾ| ಕುಮಾರ್ ಕೃತಿ ಪರಿಚಯಿಸಿದರು.


ಮಂಗಳೂರು ವಿ.ವಿ. ಸ್ನಾತಕೋತ್ತರ ತುಳು ವಿಭಾಗ ಸಂಯೋಜಕ ಡಾ| ಮಾಧವ ಎಂ.ಕೆ. ಸ್ವಾಗತಿಸಿ, ಉಪನ್ಯಾಸಕಿ ಜಯಲಕ್ಷ್ಮಿ ಶೆಟ್ಟಿ ವಂದಿಸಿದರು. ಡಾ| ಪ್ರಿಯಾ ಹರೀಶ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು