8:18 AM Friday26 - April 2024
ಬ್ರೇಕಿಂಗ್ ನ್ಯೂಸ್
ಜನಾರ್ದನ ಪೂಜಾರಿ ಮಾದರಿಯಲ್ಲಿ ಪದ್ಮರಾಜ್ ಪೂಜಾರಿ ಅಭಿವೃದ್ಧಿಯ ಹರಿಕಾರ ಆಗಲಿದ್ದಾರೆ: ಲಿಬ್‌ಝಿತ್ ಅಭಿಮತ ನೈಟ್ ಸರ್ವಿಸ್ ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ನಿವಾಸಿಯ ಬಂಧನ ರಾಜ್ಯದ 14 ಕ್ಷೇತ್ರಗಳಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಕರಾವಳಿಯಲ್ಲಿ ಸಕಲ ಸಿದ್ದತೆ;… ನಂಜನಗೂಡಿನ ಮಸ್ಟರಿಂಗ್ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ: ಮತಗಟ್ಟೆಯ ಅಧಿಕಾರಿಗಳಿಗೆ ಪಾಠ; ಜಾಗೃತಿಯಾಗಿ ಕರ್ತವ್ಯ… ನಾವು ಇಂದೇ ಹೊಂಟೇವು ಮತಗಟ್ಟೆಗೆ; ನೀವು ನಾಳೆ ತಪ್ಪದೆ ಬನ್ನಿ ಮತದಾನಕ್ಕೆ ದ.ಕ. ಲೋಕಸಭೆ ಕ್ಷೇತ್ರ: ರಾಹುಲ್, ಪ್ರಿಯಾಂಕಾ ಬಾರದೆ, ಸ್ಟಾರ್ ಕ್ಯಾಂಪೇನರ್ ಇಲ್ಲದೆ ಚುನಾವಣೆ… ಬಹಿರಂಗ ಪ್ರಚಾರದ ಕೊನೆಯ ದಿನ: ಅನುಭವ, ಕಾರ್ಯಸೂಚಿ ತೆರೆದಿಟ್ಟ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್… ಬಹಿರಂಗ ಪ್ರಚಾರದ ಕೊನೆಯ ದಿನ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಅವರಿಂದ ಪಂಪ್’ವೆಲ್’… ಪಂಪ್ ವೆಲ್ ನಿಂದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ರೋಡ್ ಶೋ: ಉರಿ… ನಂಜನಗೂಡು: ಮಾಜಿ ಶಾಸಕ ಹರ್ಷವರ್ಧನ್ ಅವರಿಂದ ಬಿಜೆಪಿ ಅಭ್ಯರ್ಥಿ ಬಾಲರಾಜ್ ಪರ ಮತಯಾಚನೆ

ಇತ್ತೀಚಿನ ಸುದ್ದಿ

ಸಾಮಾಜಿಕ ಧುರೀಣ ಪಮ್ಮಿ ಕೊಡಿಯಾಲ್ ಬೈಲ್ ಗೆ ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯಿಂದ ಗೌರವ ಪ್ರದಾನ

25/11/2022, 12:39

ಮಂಗಳೂರು(reporterkkarnataka.com): ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್(ಪಮ್ಮಿ ಕೊಡಿಯಾಲ್ ಬೈಲ್) ಅವರಿಗೆ
ದುಬೈನ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯು ಗೌರವ ಪ್ರದಾನ ಮಾಡಿ ಗೌರವಿಸಿದೆ.

ದುಬೈನ ಅಲಸಫಾ ಪ್ರದೇಶದಲ್ಲಿರುವ ಜಗದ್ಗುರು ಸುತ್ತೂರು ಸಂಸ್ಥಾನ ಶಾಲಾ ಭವನದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು ಇದರ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾದ ಪಮ್ಮಿ ಕೊಡಿಯಾಲ್ ಬೈಲ್ ಅವರಿಗೆ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ದುಬೈಯಲ್ಲಿ ನಡೆಯುತ್ತಿರುವ ಗಡಿನಾಡ ಉತ್ಸವದಲ್ಲಿ ಗೌರವ ಪ್ರದಾನ ಮಾಡಿ ಸನ್ಮಾನಿಸಲಾಯಿತು.

ಶಾಸಕರಾದ ರಘುನಾಥ ರಾವ್ ಮಲ್ಕಾಪುರೆ, ಪ್ರಕಾಶ್
ರಾಥೋಡ್, ರಾಜ್ಯ ಗಡಿನಾಡು ಅಭಿವೃದ್ಧಿ ನಿಗಮದ ಅಧ್ಯಕ್ಷ, ಮಾಜಿ ಐಎಎಸ್ ಅಧಿಕಾರಿ ಸಿ. ಸೋಮಶೇಖರ್, ಮಂಜೇಶ್ವರದ ಶಾಸಕ ಎ.ಕೆ.ಎಂ. ಅಶ್ರಫ್,ಕ್ವಾಲಿಟಿ ಇಂಡಿಯಾ ಫೌಂಡೇಶನ್ ಅಧ್ಯಕ್ಷ ಡಾ. ವೆಂಕಟೇಶ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.

ಸಾಮಾಜಿಕ, ರಾಜಕೀಯ, ಧಾರ್ಮಿಕ ಕ್ಷೇತ್ರದಲ್ಲಿ, ತನ್ನನ್ನು ತಾನು ತೊಡಗಿಸಿಕೊಂಡು ಸ್ವಾರ್ಥವಿಲ್ಲದೆ ಅಹಂ ಪಡೆಯದೇ ಹೆಸರು ಬಿರುದು ಬಯಸದೆ ಉತ್ತಮ ಸಮಾಜಕ್ಕಾಗಿ ಸೇವೆ ಸಲ್ಲಿಸುತ್ತಿರುವ ಜನ ಮೆಚ್ಚಿದ ನಾಯಕ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರಿಗೆ
ಈ ಗೌರವ ಸಂದಾಯವಾಗಿದೆ.

ಈ ಹಿಂದೆ ಬಿಜೈ ಕೆಎಸ್ಸಾರ್ಟಿಸಿ ವಿದ್ಯಾಗಣಪತಿ ಆಟೋ ಚಾಲಕ ಮಾಲಕರ ಸಂಘ ವತಿಯಿಂದ ಪಮ್ಮಿ ಅವರನ್ನು ಸನ್ಮಾನಿಸಲಾಯಿತು. ಮಂಗಳೂರು ವಿಶ್ವವಿದ್ಯಾನಿಲಯ ತುಳು ಅಧ್ಯಯನ ಪೀಠದ ಸದಸ್ಯರಾಗಿ ದಕ್ಷಿಣ ಕನ್ನಡ ಜಿಲ್ಲಾ ಕರ್ನಾಟಕ ಜಾನಪದ ಪರಿಷತ್ ಇದರ ಅಧ್ಯಕ್ಷ ರಾಗಿರುವ ಅವರು ಕೊರೋನಾ ಸಂದರ್ಭದಲ್ಲಿ ಅದೆಷ್ಟು ಮಂದಿ ಬಡವರಿಗೆ ಅಕ್ಕಿಧಾನ್ಯದ ಕಿಟ್ ಗಳನ್ನು ವಿತರಿಸಿ ಒಂದು ಕೈಯಲ್ಲಿ ಕೊಟ್ಟದು ಇನೊಂದು ಕೈಗೆ ಗೊತ್ತಾಗ ಬಾರದು ಎನ್ನುವ ಮನೋಭಾವ ಹೊಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು