2:36 PM Tuesday23 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ನಾಳೆಯ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ವಿಷಯ ಮಂಡನೆ ಇಲ್ಲ: ದೆಹಲಿಯಲ್ಲಿ ಮುಖ್ಯಮಂತ್ರಿ ಹೇಳಿಕೆ

15/01/2025, 21:17

ನವದೆಹಲಿ(reporterkarnataka.com): ಜಾತಿ ಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಇಂದು ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಜಾತಿ ಗಣತಿ ವರದಿಯ ಜಾರಿ ಬಗ್ಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದರು.
*ಎಐಸಿಸಿ ಕಚೇರಿ ಉದ್ಘಾಟನೆ:* ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಭಾಷಣ ಉತ್ತಮವಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಶಂಕುಸ್ಥಾಪನೆಗೊಂಡಿದ್ದ ಕಟ್ಟಡ , ಇಂದು ಸುಸಜ್ಜಿತ ಕಟ್ಟಡವಾಗಿ ಉದ್ಘಾಟನೆಗೊಂಡಿದೆ ಎಂದು ತಿಳಿಸಿದರು.
*ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಲಿಲ್ಲ:*
ಆರ್ ಎಸ್ ಎಸ್ ಪ್ರಮುಖ ಮೋಹನ್ ಭಾಗವತ್ ಅವರು ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿಯೂ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೇ ಆರ್ ಎಸ್ ಎಸ್ ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು. ಮೋಹನ್ ಭಾಗವತರ ಹೇಳಿಕೆ ಸರಿಯಾದುದಲ್ಲ ಎಂದರು.
*ಕೆಪಿಸಿಸಿ ಅಧ್ಯಕ್ಷರ ಬದಲಾವಣೆ- ವರಿಷ್ಠರ ತೀರ್ಮಾನ ಅಂತಿಮ:*
ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಬದಲಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.
*ಹಂತ ಹಂತವಾಗಿ ಬಾಕಿ ಪಾವತಿ:*
ಕಿಯೋನಿಕ್ಸ್ ಅಸೋಸಿಯೇಷನ್ ‍ಅವರು ಬಾಕಿ ಇರುವ ಬಿಲ್ಲುಗಳು ಪಾವತಿಯಾಗದಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದಿನ ಬಿಜೆಪಿ ಸರ್ಕಾರದವರು ದೊಡ್ಡ ಮೊತ್ತದ ಬಿಲ್ಲುಗಳನ್ನು ಪಾವತಿ ಮಾಡದೇ ಬಾಕಿ ಉಳಿಸಿದ್ದಾರೆ. ಈ ಬಿಲ್ಲುಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು