ಇತ್ತೀಚಿನ ಸುದ್ದಿ
ಸಂಸತ್ತಿನ ಮುಂಗಾರು ಅಧಿವೇಶನ ಆರಂಭ: ಮಹತ್ವದ ಮಸೂದೆ ಮಂಡಣೆ ಸಾಧ್ಯತೆ
September 14, 2020, 5:28 AM

ನವದೆಹಲಿ( reporterkarnataka news): ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾಗಿದೆ. ಬೆಳಗ್ಗೆ 9 ಗಂಟೆಗೆ ಲೋಕಸಭೆಯ ಕಲಾಪ ಆರಂಭವಾಗಿದ್ದು, ಸಾಮಾಜಿಕ ಅಂತರ ಪಾಲನೆ ಸಹಿತ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
ಹಲವು ಮಹತ್ವದ ಮಸೂದೆಗಳನ್ನು ಈ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ಭಾರತ- ಚೀನಾ ಗಡಿಯಲ್ಲಿನ ಉದ್ನಿಗ್ನತೆ, ಕೊರೊನಾ ಮಹಾ ಮಾರಿ ನಿಯಂತ್ರಿಸುವಲ್ಲಿ ವೈಫಲ್ಯ ಸೇರಿದಂತೆ ಹಲವು ವಿಷಯಗಳನ್ನು ಸದನದಲ್ಲಿ ಪ್ರಸ್ತಾಪಿಸಲು ಕಾಂಗ್ರೆಸ್ ನಿರ್ಧರಿಸಿದೆ