12:55 PM Monday31 - August 2026
ಬ್ರೇಕಿಂಗ್ ನ್ಯೂಸ್
*ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ

ಇತ್ತೀಚಿನ ಸುದ್ದಿ

ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಮಧ್ಯಂತರ ವರದಿ ಸಲ್ಲಿಕೆ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

03/02/2022, 08:46

ಬೆಂಗಳೂರು(reporterkarnataka.com): ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.

ಅವರು ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣಗಳ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚಿಸಿರುವ ಸಮಿತಿ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.

ರಾಜ್ಯದ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಹಾಗೂ ನಿರೀಕ್ಷೆಗಳನ್ನು ಹಂಚಿಕೊಂಡ ಮುಖ್ಯಮಂತ್ರಿಗಳು, ಈ ಸಂಸ್ಥೆಗಳ ಸಾಮರ್ಥ್ಯ ಗುರುತಿಸಿ, ಅವುಗಳ ದಕ್ಷ ಬಳಕೆಗೆ ಮಾರ್ಗೋಪಾಯಗಳನ್ನು ಶಿಫಾರಸು ಮಾಡುವಂತೆ ತಿಳಿಸಿದರು.

ಸಾರಿಗೆ ಸಂಸ್ಥೆಗಳ ಆಸ್ತಿಗಳಿಂದ ಆದಾಯೋತ್ಪನ್ನ, ಸಂಸ್ಥೆಯ ವರ್ಕ್ ಶಾಪ್ ಗಳ ಸದ್ಬಳಕೆ, ಮಾನವ ಸಂಪನ್ಮೂಲದ ದಕ್ಷ ಬಳಕೆ, ಸಂಸ್ಥೆಗಳ ಸೇವೆಯಲ್ಲಿ ಸುಧಾರಣೆ, ತಂತ್ರಜ್ಞಾನದ ಬಳಕೆ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ತಾವು ಕೈಗೊಂಡ ಕ್ರಮಗಳ ಕುರಿತು ಎಂ.ಆರ್. ಶ್ರೀನಿವಾಸಮೂರ್ತಿ ಮಾಹಿತಿ ನೀಡಿದರು.

ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ, ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು