7:34 AM Thursday29 - January 2026
ಬ್ರೇಕಿಂಗ್ ನ್ಯೂಸ್
ಸುನಿಲ್ ಕುಮಾರ್ ಪರಶುರಾಮನ ಮೂರ್ತಿಯ ಫೈಬರ್ ನಲ್ಲಿ ಮಾಡಿಸಿ ಕಂಚಿನದ್ದು ಎಂದು ನಂಬಿಸಿದ್ದರು:… ಸೋಮವಾರಪೇಟೆ ಕಾಜೂರಿನಲ್ಲಿ ಭಾರೀ ಬೆಂಕಿ ಅವಘಡ: ಮನೆಯೊಳಗೆ ನಿದ್ರಿಸುತ್ತಿದ್ದ ಬಾಲಕ ಬಚಾವ್ ಮಾಡಿದ… ಕೊಡಗಿನ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧ: ಉಸ್ತುವಾರಿ ಸಚಿವ ಬೋಸರಾಜ್ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕಾರ್ಯಾಲದಲ್ಲಿ ಗಣರಾಜ್ಯೋತ್ಸವ: 130ಕ್ಕೂ ಅಧಿಕ ವಾಹನ ಚಾಲಕಿಯರಿಗೆ… ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ

ಇತ್ತೀಚಿನ ಸುದ್ದಿ

ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಮಧ್ಯಂತರ ವರದಿ ಸಲ್ಲಿಕೆ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

03/02/2022, 08:46

ಬೆಂಗಳೂರು(reporterkarnataka.com): ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.

ಅವರು ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣಗಳ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚಿಸಿರುವ ಸಮಿತಿ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.

ರಾಜ್ಯದ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಹಾಗೂ ನಿರೀಕ್ಷೆಗಳನ್ನು ಹಂಚಿಕೊಂಡ ಮುಖ್ಯಮಂತ್ರಿಗಳು, ಈ ಸಂಸ್ಥೆಗಳ ಸಾಮರ್ಥ್ಯ ಗುರುತಿಸಿ, ಅವುಗಳ ದಕ್ಷ ಬಳಕೆಗೆ ಮಾರ್ಗೋಪಾಯಗಳನ್ನು ಶಿಫಾರಸು ಮಾಡುವಂತೆ ತಿಳಿಸಿದರು.

ಸಾರಿಗೆ ಸಂಸ್ಥೆಗಳ ಆಸ್ತಿಗಳಿಂದ ಆದಾಯೋತ್ಪನ್ನ, ಸಂಸ್ಥೆಯ ವರ್ಕ್ ಶಾಪ್ ಗಳ ಸದ್ಬಳಕೆ, ಮಾನವ ಸಂಪನ್ಮೂಲದ ದಕ್ಷ ಬಳಕೆ, ಸಂಸ್ಥೆಗಳ ಸೇವೆಯಲ್ಲಿ ಸುಧಾರಣೆ, ತಂತ್ರಜ್ಞಾನದ ಬಳಕೆ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ತಾವು ಕೈಗೊಂಡ ಕ್ರಮಗಳ ಕುರಿತು ಎಂ.ಆರ್. ಶ್ರೀನಿವಾಸಮೂರ್ತಿ ಮಾಹಿತಿ ನೀಡಿದರು.

ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ, ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು