5:16 PM Sunday22 - February 2026
ಬ್ರೇಕಿಂಗ್ ನ್ಯೂಸ್
ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ

ಇತ್ತೀಚಿನ ಸುದ್ದಿ

ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಮಧ್ಯಂತರ ವರದಿ ಸಲ್ಲಿಕೆ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

03/02/2022, 08:46

ಬೆಂಗಳೂರು(reporterkarnataka.com): ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.

ಅವರು ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣಗಳ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚಿಸಿರುವ ಸಮಿತಿ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.

ರಾಜ್ಯದ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಹಾಗೂ ನಿರೀಕ್ಷೆಗಳನ್ನು ಹಂಚಿಕೊಂಡ ಮುಖ್ಯಮಂತ್ರಿಗಳು, ಈ ಸಂಸ್ಥೆಗಳ ಸಾಮರ್ಥ್ಯ ಗುರುತಿಸಿ, ಅವುಗಳ ದಕ್ಷ ಬಳಕೆಗೆ ಮಾರ್ಗೋಪಾಯಗಳನ್ನು ಶಿಫಾರಸು ಮಾಡುವಂತೆ ತಿಳಿಸಿದರು.

ಸಾರಿಗೆ ಸಂಸ್ಥೆಗಳ ಆಸ್ತಿಗಳಿಂದ ಆದಾಯೋತ್ಪನ್ನ, ಸಂಸ್ಥೆಯ ವರ್ಕ್ ಶಾಪ್ ಗಳ ಸದ್ಬಳಕೆ, ಮಾನವ ಸಂಪನ್ಮೂಲದ ದಕ್ಷ ಬಳಕೆ, ಸಂಸ್ಥೆಗಳ ಸೇವೆಯಲ್ಲಿ ಸುಧಾರಣೆ, ತಂತ್ರಜ್ಞಾನದ ಬಳಕೆ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ತಾವು ಕೈಗೊಂಡ ಕ್ರಮಗಳ ಕುರಿತು ಎಂ.ಆರ್. ಶ್ರೀನಿವಾಸಮೂರ್ತಿ ಮಾಹಿತಿ ನೀಡಿದರು.

ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ, ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು