4:21 AM Tuesday5 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಮಧ್ಯಂತರ ವರದಿ ಸಲ್ಲಿಕೆ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

03/02/2022, 08:46

ಬೆಂಗಳೂರು(reporterkarnataka.com): ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.

ಅವರು ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣಗಳ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚಿಸಿರುವ ಸಮಿತಿ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.

ರಾಜ್ಯದ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಹಾಗೂ ನಿರೀಕ್ಷೆಗಳನ್ನು ಹಂಚಿಕೊಂಡ ಮುಖ್ಯಮಂತ್ರಿಗಳು, ಈ ಸಂಸ್ಥೆಗಳ ಸಾಮರ್ಥ್ಯ ಗುರುತಿಸಿ, ಅವುಗಳ ದಕ್ಷ ಬಳಕೆಗೆ ಮಾರ್ಗೋಪಾಯಗಳನ್ನು ಶಿಫಾರಸು ಮಾಡುವಂತೆ ತಿಳಿಸಿದರು.

ಸಾರಿಗೆ ಸಂಸ್ಥೆಗಳ ಆಸ್ತಿಗಳಿಂದ ಆದಾಯೋತ್ಪನ್ನ, ಸಂಸ್ಥೆಯ ವರ್ಕ್ ಶಾಪ್ ಗಳ ಸದ್ಬಳಕೆ, ಮಾನವ ಸಂಪನ್ಮೂಲದ ದಕ್ಷ ಬಳಕೆ, ಸಂಸ್ಥೆಗಳ ಸೇವೆಯಲ್ಲಿ ಸುಧಾರಣೆ, ತಂತ್ರಜ್ಞಾನದ ಬಳಕೆ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ತಾವು ಕೈಗೊಂಡ ಕ್ರಮಗಳ ಕುರಿತು ಎಂ.ಆರ್. ಶ್ರೀನಿವಾಸಮೂರ್ತಿ ಮಾಹಿತಿ ನೀಡಿದರು.

ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ, ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು