12:37 AM Saturday8 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಮಧ್ಯಂತರ ವರದಿ ಸಲ್ಲಿಕೆ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

03/02/2022, 08:46

ಬೆಂಗಳೂರು(reporterkarnataka.com): ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.

ಅವರು ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣಗಳ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚಿಸಿರುವ ಸಮಿತಿ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.

ರಾಜ್ಯದ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಹಾಗೂ ನಿರೀಕ್ಷೆಗಳನ್ನು ಹಂಚಿಕೊಂಡ ಮುಖ್ಯಮಂತ್ರಿಗಳು, ಈ ಸಂಸ್ಥೆಗಳ ಸಾಮರ್ಥ್ಯ ಗುರುತಿಸಿ, ಅವುಗಳ ದಕ್ಷ ಬಳಕೆಗೆ ಮಾರ್ಗೋಪಾಯಗಳನ್ನು ಶಿಫಾರಸು ಮಾಡುವಂತೆ ತಿಳಿಸಿದರು.

ಸಾರಿಗೆ ಸಂಸ್ಥೆಗಳ ಆಸ್ತಿಗಳಿಂದ ಆದಾಯೋತ್ಪನ್ನ, ಸಂಸ್ಥೆಯ ವರ್ಕ್ ಶಾಪ್ ಗಳ ಸದ್ಬಳಕೆ, ಮಾನವ ಸಂಪನ್ಮೂಲದ ದಕ್ಷ ಬಳಕೆ, ಸಂಸ್ಥೆಗಳ ಸೇವೆಯಲ್ಲಿ ಸುಧಾರಣೆ, ತಂತ್ರಜ್ಞಾನದ ಬಳಕೆ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ತಾವು ಕೈಗೊಂಡ ಕ್ರಮಗಳ ಕುರಿತು ಎಂ.ಆರ್. ಶ್ರೀನಿವಾಸಮೂರ್ತಿ ಮಾಹಿತಿ ನೀಡಿದರು.

ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ, ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು