11:34 PM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಮಧ್ಯಂತರ ವರದಿ ಸಲ್ಲಿಕೆ: ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

03/02/2022, 08:46

ಬೆಂಗಳೂರು(reporterkarnataka.com): ರಾಜ್ಯದ ರಸ್ತೆ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲಿ ಮಧ್ಯಂತರ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದ್ದಾರೆ.

ಅವರು ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣಗಳ ಅಧ್ಯಯನ ನಡೆಸಿ ವರದಿ ಸಲ್ಲಿಸಲು ರಚಿಸಿರುವ ಸಮಿತಿ ಅಧ್ಯಕ್ಷ, ನಿವೃತ್ತ ಐಎಎಸ್ ಅಧಿಕಾರಿ ಎಂ.ಆರ್. ಶ್ರೀನಿವಾಸಮೂರ್ತಿ ಅವರೊಂದಿಗೆ ನಡೆಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.

ರಾಜ್ಯದ ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯ ಹಾಗೂ ನಿರೀಕ್ಷೆಗಳನ್ನು ಹಂಚಿಕೊಂಡ ಮುಖ್ಯಮಂತ್ರಿಗಳು, ಈ ಸಂಸ್ಥೆಗಳ ಸಾಮರ್ಥ್ಯ ಗುರುತಿಸಿ, ಅವುಗಳ ದಕ್ಷ ಬಳಕೆಗೆ ಮಾರ್ಗೋಪಾಯಗಳನ್ನು ಶಿಫಾರಸು ಮಾಡುವಂತೆ ತಿಳಿಸಿದರು.

ಸಾರಿಗೆ ಸಂಸ್ಥೆಗಳ ಆಸ್ತಿಗಳಿಂದ ಆದಾಯೋತ್ಪನ್ನ, ಸಂಸ್ಥೆಯ ವರ್ಕ್ ಶಾಪ್ ಗಳ ಸದ್ಬಳಕೆ, ಮಾನವ ಸಂಪನ್ಮೂಲದ ದಕ್ಷ ಬಳಕೆ, ಸಂಸ್ಥೆಗಳ ಸೇವೆಯಲ್ಲಿ ಸುಧಾರಣೆ, ತಂತ್ರಜ್ಞಾನದ ಬಳಕೆ ಮೊದಲಾದ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಸಮಿತಿಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ತಾವು ಕೈಗೊಂಡ ಕ್ರಮಗಳ ಕುರಿತು ಎಂ.ಆರ್. ಶ್ರೀನಿವಾಸಮೂರ್ತಿ ಮಾಹಿತಿ ನೀಡಿದರು.

ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ಹಣಕಾಸು ಇಲಾಖೆ ಕಾರ್ಯದರ್ಶಿ ಏಕ್ ರೂಪ್ ಕೌರ್, ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಠಾರಿಯಾ, ಕೆ.ಎಸ್.ಆರ್.ಟಿ.ಸಿ. ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು