8:51 AM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಶಿರಾಡಿ ಘಾಟಿ ಬಂದ್ ಫಲಶೃತಿ: ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು ಆರಂಭ

25/07/2022, 13:21

ಬೆಂಗಳೂರು(reporterkarnataka.com): ಶಿರಾಡಿ ಘಾಟ್ ಬಂದ್ ಆದ ಹಿನ್ನೆಲೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಪ್ರಯಾಣಿಕರಿಗೆ ವಿಶೇಷ ರೈಲು ಸೇವೆ ಕಲ್ಪಿಸಲಾಗಿದೆ.

ಜುಲೈ 26 ರಿಂದ ಆಗಸ್ಟ್ 30ರ ತನಕ ವಾರದಲ್ಲಿ ಮೂರು ದಿನ ವಿಶೇಷ ರೈಲುಗಳು ಸಂಚಾರ ನಡೆಸಲಿವೆ. ಇದರಿಂದಾಗಿ ಕರಾವಳಿ-ಬೆಂಗಳೂರು ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ.

ಮಂಗಳೂರು ಮತ್ತು ಬೆಂಗಳೂರು ನಡುವಿನ ಪ್ರಯಾಣಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಉಭಯ ನಗರಗಳ ನಡುವೆ ಹೆಚ್ಚುವರಿ ರೈಲನ್ನು ಓಡಿಸಬೇಕು ಎಂದು

 ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದರು. ರೈಲ್ವೆ ಇಲಾಖೆ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

ಜುಲೈ 26 ರಿಂದ ಆಗಸ್ಟ್ 30ರ ತನಕ ವಾರದಲ್ಲಿ ಮೂರು ದಿನ ವಿಶೇಷ ರೈಲುಗಳು ಸಂಚಾರ ನಡೆಸಲಿವೆ. ಇದರಿಂದಾಗಿ ಕರಾವಳಿ-ಬೆಂಗಳೂರು ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮತ್ತು ಮಂಗಳೂರು ಸೆಂಟ್ರಲ್ ವಿಮಾನ ನಿಲ್ದಾಣಗಳ ನಡುವೆ ಈ ವಿಶೇಷ ರೈಲು ಸಂಚಾರ ನಡೆಸಲಿದೆ. ಸುಮಾರು ಒಂದು ತಿಂಗಳ ಕಾಲ ರೈಲು ಸಂಚಾರ ನಡೆಸಲಿದ್ದು, ಬಳಿಕ ಅದನ್ನು ಮುಂದುವರೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ.

ಬೆಂಗಳೂರು-ಮಂಗಳೂರು ನಡುವೆ 06547/ 06548 ಸಂಖ್ಯೆಯ ರೈಲುಗಳು ಸಂಚಾರ ನಡೆಸಲಿವೆ. ವಾರದಲ್ಲಿ ಮೂರು ದಿನಗಳ ಕಾಲ ಈ ವಿಶೇಷ ರೈಲುಗಳು ಸಂಚಾರ ನಡೆಸಲಿವೆ ಎಂದು ರೈಲ್ವೆ ಇಲಾಖೆ ಹೇಳಿದೆ.

ರೈಲು ಸಂಖ್ಯೆ 06547 ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಭಾನುವಾರ, ಮಂಗಳವಾರ ಮತ್ತು ಗುರುವಾರ ಸಂಚಾರ ನಡೆಸಲಿದೆ. ಮಂಗಳೂರು ಜಂಕ್ಷನ್‌ನಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರ 06548 ಸಂಖ್ಯೆಯ ರೈಲು ಸಂಚಾರ ನಡೆಸಲಿದೆ. ಕಳೆದ ವಾರ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿ, ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ರೈಲುಗಳನ್ನು ಓಡಿಸಬೇಕು ಎಂದು ಮನವಿ ಮಾಡಿದ್ದರು.

ಸಂಸದರು ನೀಡಿದ ಮನವಿಗೆ ರೈಲ್ವೆ ಸಚಿವರು ಸ್ಪಂದಿಸಿದ್ದರು. “ನನ್ನ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವರು, ಈ ಕುರಿತು ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಭಾರೀ ಮಳೆಯ ಕಾರಣ ದೋಣಿಗಲ್‌ನಲ್ಲಿ ಭೂ ಕುಸಿತ ಉಂಟಾಗಿತ್ತು. ಆದ್ದರಿಂದ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದಾಗಿ ಸಂಪಾಜೆ ಮತ್ತು ಚಾರ್ಮಾಡಿ ಘಾಟ್‌ಗಳ ಮೇಲೆ ಒತ್ತಡ ಹೆಚ್ಚಾಗಿದೆ. ಶಿರಾಡಿ ಘಾಟ್ ಮಂಗಳೂರು-ಬೆಂಗಳೂರು ಸಂಪರ್ಕಿಸುವ ಮುಖ್ಯ ರಸ್ತೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು