10:03 AM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಶಿರಾಡಿ ಘಾಟಿ ಬಂದ್ ಫಲಶೃತಿ: ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು ಆರಂಭ

25/07/2022, 13:21

ಬೆಂಗಳೂರು(reporterkarnataka.com): ಶಿರಾಡಿ ಘಾಟ್ ಬಂದ್ ಆದ ಹಿನ್ನೆಲೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ ಪ್ರಯಾಣಿಕರಿಗೆ ವಿಶೇಷ ರೈಲು ಸೇವೆ ಕಲ್ಪಿಸಲಾಗಿದೆ.

ಜುಲೈ 26 ರಿಂದ ಆಗಸ್ಟ್ 30ರ ತನಕ ವಾರದಲ್ಲಿ ಮೂರು ದಿನ ವಿಶೇಷ ರೈಲುಗಳು ಸಂಚಾರ ನಡೆಸಲಿವೆ. ಇದರಿಂದಾಗಿ ಕರಾವಳಿ-ಬೆಂಗಳೂರು ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ.

ಮಂಗಳೂರು ಮತ್ತು ಬೆಂಗಳೂರು ನಡುವಿನ ಪ್ರಯಾಣಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಉಭಯ ನಗರಗಳ ನಡುವೆ ಹೆಚ್ಚುವರಿ ರೈಲನ್ನು ಓಡಿಸಬೇಕು ಎಂದು

 ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದರು. ರೈಲ್ವೆ ಇಲಾಖೆ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

ಜುಲೈ 26 ರಿಂದ ಆಗಸ್ಟ್ 30ರ ತನಕ ವಾರದಲ್ಲಿ ಮೂರು ದಿನ ವಿಶೇಷ ರೈಲುಗಳು ಸಂಚಾರ ನಡೆಸಲಿವೆ. ಇದರಿಂದಾಗಿ ಕರಾವಳಿ-ಬೆಂಗಳೂರು ನಡುವೆ ಸಂಚಾರ ನಡೆಸುವ ಜನರಿಗೆ ಅನುಕೂಲವಾಗಲಿದೆ. ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಮತ್ತು ಮಂಗಳೂರು ಸೆಂಟ್ರಲ್ ವಿಮಾನ ನಿಲ್ದಾಣಗಳ ನಡುವೆ ಈ ವಿಶೇಷ ರೈಲು ಸಂಚಾರ ನಡೆಸಲಿದೆ. ಸುಮಾರು ಒಂದು ತಿಂಗಳ ಕಾಲ ರೈಲು ಸಂಚಾರ ನಡೆಸಲಿದ್ದು, ಬಳಿಕ ಅದನ್ನು ಮುಂದುವರೆಸುವ ಕುರಿತು ತೀರ್ಮಾನ ಕೈಗೊಳ್ಳಲಾಗುತ್ತದೆ.

ಬೆಂಗಳೂರು-ಮಂಗಳೂರು ನಡುವೆ 06547/ 06548 ಸಂಖ್ಯೆಯ ರೈಲುಗಳು ಸಂಚಾರ ನಡೆಸಲಿವೆ. ವಾರದಲ್ಲಿ ಮೂರು ದಿನಗಳ ಕಾಲ ಈ ವಿಶೇಷ ರೈಲುಗಳು ಸಂಚಾರ ನಡೆಸಲಿವೆ ಎಂದು ರೈಲ್ವೆ ಇಲಾಖೆ ಹೇಳಿದೆ.

ರೈಲು ಸಂಖ್ಯೆ 06547 ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಭಾನುವಾರ, ಮಂಗಳವಾರ ಮತ್ತು ಗುರುವಾರ ಸಂಚಾರ ನಡೆಸಲಿದೆ. ಮಂಗಳೂರು ಜಂಕ್ಷನ್‌ನಿಂದ ಸೋಮವಾರ, ಬುಧವಾರ ಮತ್ತು ಶುಕ್ರವಾರ 06548 ಸಂಖ್ಯೆಯ ರೈಲು ಸಂಚಾರ ನಡೆಸಲಿದೆ. ಕಳೆದ ವಾರ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಕೇಂದ್ರ ರೈಲ್ವೆ ಸಚಿವರನ್ನು ಭೇಟಿ ಮಾಡಿ, ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ರೈಲುಗಳನ್ನು ಓಡಿಸಬೇಕು ಎಂದು ಮನವಿ ಮಾಡಿದ್ದರು.

ಸಂಸದರು ನೀಡಿದ ಮನವಿಗೆ ರೈಲ್ವೆ ಸಚಿವರು ಸ್ಪಂದಿಸಿದ್ದರು. “ನನ್ನ ಮನವಿಗೆ ಸ್ಪಂದಿಸಿದ ರೈಲ್ವೆ ಸಚಿವರು, ಈ ಕುರಿತು ಕ್ರಮ ಕೈಗೊಳ್ಳುತ್ತೇವೆ” ಎಂದು ಭರವಸೆ ನೀಡಿದ್ದಾರೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದರು. ಭಾರೀ ಮಳೆಯ ಕಾರಣ ದೋಣಿಗಲ್‌ನಲ್ಲಿ ಭೂ ಕುಸಿತ ಉಂಟಾಗಿತ್ತು. ಆದ್ದರಿಂದ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಇದರಿಂದಾಗಿ ಸಂಪಾಜೆ ಮತ್ತು ಚಾರ್ಮಾಡಿ ಘಾಟ್‌ಗಳ ಮೇಲೆ ಒತ್ತಡ ಹೆಚ್ಚಾಗಿದೆ. ಶಿರಾಡಿ ಘಾಟ್ ಮಂಗಳೂರು-ಬೆಂಗಳೂರು ಸಂಪರ್ಕಿಸುವ ಮುಖ್ಯ ರಸ್ತೆಯಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು