8:52 AM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಸ್ಮಾರ್ಟ್ ಸಿಟಿ ‘ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ ಹಾಗೂ ಸ್ವಚ್ಛತಾ ಕಾರ್ಯಕ್ರಮ

27/12/2021, 13:10

ಚಿತ್ರ:ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಕ್ರೆಡೈ ಮಂಗಳೂರು ಮತ್ತು ಮಂಗಳೂರು ವಿಶ್ವವಿದ್ಯಾನಿಲಯ  ರಾಷ್ಟ್ರೀಯ ಸೇವಾ ಯೋಜನೆ  ಆಶ್ರಯದಲ್ಲಿ ಸ್ಮಾರ್ಟ್ ಸಿಟಿ ‘ಕ್ಲೀನ್ ಬೀಚ್’ ಜಾಗೃತಿಗಾಗಿ ಓಟ ಹಾಗೂ ಸ್ವಚ್ಚತಾ ಕಾರ್ಯಕ್ರಮ ಡಿ.26ರಂದು ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ನಡೆಯಿತು. 


ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮವನ್ನು ಸ್ವಚ್ಛತೆ ಮಾಡುವ ಮೂಲಕ ಉದ್ಘಾಟಿಸಿ,  ಸ್ವಚ್ಛತಾ ಓಟಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ  ಮಾತನಾಡಿದ ಅವರು, ಕರಾವಳಿ ಜಿಲ್ಲೆಯ ಸೌಂದರ್ಯ, ನಮ್ಮ ಪ್ರವಾಸೋದ್ಯಮದ ಕನ್ನಡಿ ಎಂದರೆ ಅದು ನಮ್ಮ ಬೀಚ್‌ಗಳು. ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿರುವ ಮಂಗಳೂರು ಸ್ವಚ್ಛವಾಗಿರುವುದರ ಜೊತೆಗೆ ಕಡಲ ತೀರವನ್ನು ಸ್ವಚ್ಛವಾಗಿ ಇರಿಸಬೇಕಾದ ಅಗತ್ಯವಿದೆ ಎಂದು ಹೇಳಿದರು. 


ಸ್ವಚ್ಛತೆಯ ಕುರಿತ ಜಾಗೃತಿಗಾಗಿ ಇಲಾಖೆಗಳು ಮತ್ತು ಮಾಧ್ಯಮಗಳು ಒಟ್ಟಾಗಿ ಕೆಲಸ‌ ಮಾಡಬೇಕಾಗಿದೆ ಎಂದವರು ಅಭಿಪ್ರಾಯಪಟ್ಟರು.


ಮುಖ್ಯ ಅತಿಥಿಯಾಗಿದ್ದ ಶಾಸಕ ಡಾ.ಭರತ್ ಶೆಟ್ಟಿ ಮಾತನಾಡಿ, ನಮ್ಮ ಪರಿಸರ ಮತ್ತು ಬೀಚ್‌ಗಳನ್ನು ಸ್ವಚ್ಛವಾಗಿ ಸಂರಕ್ಷಿಸಬೇಕಾದ ಜವಾಬ್ದಾರಿ ಇದೆ ಎಂದು ನುಡಿದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ದ.ಕ.ಜಿಲ್ಲಾ ಪಂಚಾಯತ್ ಸಿಇಒ ಡಾ.ಕುಮಾರ್, ನಗರ ಪಾಲಿಕೆಯ ಆಯುಕ್ತ ಅಕ್ಷಯ್ ಶ್ರೀಧರ್, ಕ್ರೆಡೈ ಮಂಗಳೂರು ಇದರ ಅಧ್ಯಕ್ಷ ಪುಷ್ಪರಾಜ ಜೈನ್,  ಕೆಐಒಸಿಎಲ್ ಜನರಲ್ ಮ್ಯಾನೇಜರ್ ರಾಮಕೃಷ್ಣ ರಾವ್  ಎಚ್, ಸೀನಿಯರ್ ಮ್ಯಾನೇಜರ್ ಮುರುಗೇಶ್, ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ. ಎ., ಬೈಕಂಪಾಡಿ ಮೊಗವೀರ ಮಹಾಸಭಾದ ಅಧ್ಯಕ್ಷ ವಸಂತ ಅಮೀನ್, ಯತೀಶ್ ಬೈಕಂಪಾಡಿ, ಯಂಗ್ ಸ್ಟಾರ್ ಪಣಂಬೂರು ಅಧ್ಯಕ್ಷ ನವೀನ್ ಸಾಲಿಯಾನ, ಸಂತೋಷ್ ಗುರಿಕಾರ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ  ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು.



ಬಳಿಕ ಬೀಚ್ ಸ್ವಚ್ಚತಾ ಜಾಗೃತಿ ಓಟ ಮತ್ತು ಸ್ವಚ್ಛತಾ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾಯೋಜನೆಯ ಸ್ವಯಂ ಸೇವಕರು ಪಾಲ್ಗೊಂಡು ಸ್ವಚ್ಛತಾ ಕಾರ್ಯ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು