11:57 AM Friday21 - November 2025
ಬ್ರೇಕಿಂಗ್ ನ್ಯೂಸ್
ದ್ವಿಚಕ್ರ ವಾಹನದಲ್ಲಿ ಮಕ್ಕಳಿಗೂ ಹೆಲ್ಮೆಟ್‌ ಕಡ್ಡಾಯ: ರಾಜ್ಯ ಸರಕಾರಕ್ಕೆ ಹೈಕೋರ್ಟ್ ಆದೇಶ ಡಿ. 6ರಂದು ಹಾಸನಕ್ಕೆ ಸಿಎಂ ಭೇಟಿ: ನೂತನ ಕಂದಾಯ ಗ್ರಾಮಗಳ ನಿವಾಸಿಗಳಿಗೆ ಹಕ್ಕುಪತ್ರ… Bangalore | ನಾಯಿ ದಾಳಿಯಿಂದ ಸಾವನ್ನಪ್ಪಿದವರಿಗೆ ರಾಜ್ಯ ಸರ್ಕಾರ 5 ಲಕ್ಷ ರೂ.… ಕಲಾ ಗ್ರಾಮದಲ್ಲಿ ಸಾಲುಮರದ ತಿಮ್ಮಕ್ಕ ಜತೆಗೆ ಸಾಹಿತಿ ಯು.ಆರ್. ಅನಂತಮೂರ್ತಿ, ಕವಿ ಡಾ.… ಬಿಜೆಪಿಯಿಂದ ಭೀಮ ಸ್ಮರಣೆ ಕಾರ್ಯಕ್ರಮ; ಕಾಂಗ್ರೆಸ್‌ ಮಾಡಿದ ಅನ್ಯಾಯದ ಕುರಿತು ಜಾಗೃತಿ: ಪ್ರತಿಪಕ್ಷ… ಭಾರತದ ಅತ್ಯಂತ ವಿಶ್ವಾಸಾರ್ಹ ಹೂಡಿಕೆಯ ತಾಣ ಕರ್ನಾಟಕ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಜನ್ಮದಿನಾಚರಣೆ ಚಾಲಕನ ಅಜಾಗರೂಕತೆ: ವಿದ್ಯಾರ್ಥಿಗಳಿಂದ ತುಂಬಿದ್ದ ಕೇರಳ ಮೂಲದ ಪ್ರವಾಸಿ ಬಸ್ ಪಲ್ಟಿ ಕೊಡಗಿನ ಪ್ರಮುಖ ಹಬ್ಬ ಪುತ್ತರಿಗೆ ದಿನಾಂಕ ನಿಗದಿ: ಪಾಡಿ ಶ್ರೀ ಇಗ್ಗುತ್ತಪ್ಪ ಸನ್ನಿಧಿಯಲ್ಲಿ… ಕೊಡಗಿನಲ್ಲಿ ಹೆಚ್ಚಾಗುತ್ತಿರುವ ಬೀದಿ ನಾಯಿ ಹಾವಳಿ ತಡೆಗೆ ಜಿಲ್ಲಾಡಳಿತ ಕ್ರಮ: ಶ್ವಾನಗಳ ಸ್ಥಳಾಂತರಕ್ಕಾಗಿ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಹಾಲಿನ ಕ್ಯಾನು ವಿತರಣೆ; ಕರುಗಳ ಪ್ರದರ್ಶನ, ಹಸಿರು ಮೇವು ಕ್ಷೇತ್ರೋತ್ಸವ 

13/03/2022, 10:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ

info.reporterkarnataka@gmail.com

ರೈತರು ಸರ್ಕಾರ ಹಾಗೂ ಕೋಚಿಮುಲ್ ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು. ಆರ್ಥಿಕ ಸ್ಥಿತಿ ಉತ್ತಮಪಡಿಸಿಕೊಳ್ಳಬೆಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಕೋಚಿಮುಲ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಹಾಲಿನ ಕ್ಯಾನು ವಿತರಣೆ, ಕರುಗಳ ಪ್ರದರ್ಶನ ಹಾಗೂ ಹಸಿರು ಮೇವು ಕ್ಷೇತ್ರೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ದಿನವೊಂದಕ್ಕೆ ೫೦ ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದರಿಗೆ ತಿಂಗಳಿಗೆ ರೂ.೪.೮೦ ಕೋಟಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕೃಷಿಕ ಕುಟುಂಬಗಳ ಆರ್ಥಿಕಾಭಿವೃದ್ಧಿಯಲ್ಲಿ ಹಾಲು ಮುಖ್ಯ ಪಾತ್ರವಹಿಸಿದೆ. ಹಸಿರು ಹುಲ್ಲಿನ ಸಮಸ್ಯೆ ನಿವಾರಣೆಗೆ ತಾಲ್ಲೂಕಿನ ಕಾಡುಗಳಲ್ಲಿ ಕ್ಷೀರೋತ್ಪಾದಕರು ಹುಲ್ಲು ಬೆಳೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ಶಿಬಿರ ಕಚೇರಿ ವ್ಯವಸ್ಥಾಪಕ ಆರ್.ಜಿ.ನರಸಿಂಹಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ನಿರ್ದೇಶಕ ಎಸ್.ಜಿ.ಜಗದೀಶ್ ಎನ್.ಜಿ.ಬೇಟಪ್ಪ, ಎಸ್.ವಿ.ಸುಧಾಕರ್, ಮುನಿವೆಂಕಟಪ್ಪ, ಅಯ್ಯಪ್ಪ, ಕೆ.ಕೆ.ಮಂಜು, ಶ್ರೀನಿವಾಸ ಗೌಡ, ಜಿ.ಎಂ.ಶ್ರೀರಾಮರೆಡ್ಡಿ, ಹರೀಶ್ ನಾರಾಯಣಸ್ವಾಮಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು