7:01 PM Tuesday9 - December 2025
ಬ್ರೇಕಿಂಗ್ ನ್ಯೂಸ್
ಮಕ್ಕಳ ರಕ್ಷಣಾ ನಿರ್ದೇಶನಾಲಯದ ಯೋಜನೆಗಳ ಸಮರ್ಪಕ ಜಾರಿಗೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೆಎಸ್ಸಾರ್ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್… ಸುವರ್ಣಸೌಧ ಮುತ್ತಿಗೆ ಹಾಕಲು ಯತ್ನ; ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸೇರಿ ಪ್ರತಿಭಟನಾಕಾರರು ಪೊಲೀಸ್… ತೀರ್ಥಹಳ್ಳಿ ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ ಸಿಎ ಸೈಟ್ ನಲ್ಲಿ ಕಟ್ಟಡ ನಿರ್ಮಾಣಕ್ಕೆ ಕಾಲಮಿತಿ ಷರತ್ತು ಸಡಿಲಿಕೆಗೆ ಕ್ರಮ: ವಿಧಾನ… ಜವಾಹರಲಾಲ್ ನೆಹರು ಹೊಂದಾಣಿಕೆಯ ಶಿಲ್ಪಿಯಾಗಿದ್ದರು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿದ್ವಾಯಿ ಆಸ್ಪತ್ರೆ: ಒಂದೇ ಮೂತ್ರಪಿಂಡ ಹೊಂದಿದ್ದ ವಿಲ್ಮ್ಸ್ ಟ್ಯೂಮರ್ ಕಾಯಿಲೆಪೀಡಿತ ಬಾಲಕನಿಗೆ ಯಶಸ್ವಿ… ​ಬೆಂಗಳೂರಿನಲ್ಲಿ ವಾಹನಗಳ ಸಂಖ್ಯಾ ಸ್ಫೋಟ: 1.47 ಕೋಟಿ ಜನಸಂಖ್ಯೆ; 1.23 ಕೋಟಿ ವಾಹನಗಳ… ಬೆಳಗಾವಿ ಚಳಿಗಾಲದ ಅಧಿವೇಶನದ ನಾಳೆಯಿಂದ ಆರಂಭ: ಕುಂದನಗರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ ನನ್ನದು ಕೃಷ್ಣತತ್ವ, ಕಾಂಗ್ರೆಸ್ ಪಕ್ಷದ್ದು ಕಂಸತತ್ವ; ಕೃಷ್ಣಬೋಧೆ ಸಾರ್ವಕಾಲಿಕ, ಭಗವದ್ಗೀತೆ ಕಾಲಾತೀತ: ಕೇಂದ್ರ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಹಾಲಿನ ಕ್ಯಾನು ವಿತರಣೆ; ಕರುಗಳ ಪ್ರದರ್ಶನ, ಹಸಿರು ಮೇವು ಕ್ಷೇತ್ರೋತ್ಸವ 

13/03/2022, 10:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ

info.reporterkarnataka@gmail.com

ರೈತರು ಸರ್ಕಾರ ಹಾಗೂ ಕೋಚಿಮುಲ್ ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು. ಆರ್ಥಿಕ ಸ್ಥಿತಿ ಉತ್ತಮಪಡಿಸಿಕೊಳ್ಳಬೆಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಕೋಚಿಮುಲ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಹಾಲಿನ ಕ್ಯಾನು ವಿತರಣೆ, ಕರುಗಳ ಪ್ರದರ್ಶನ ಹಾಗೂ ಹಸಿರು ಮೇವು ಕ್ಷೇತ್ರೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ದಿನವೊಂದಕ್ಕೆ ೫೦ ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದರಿಗೆ ತಿಂಗಳಿಗೆ ರೂ.೪.೮೦ ಕೋಟಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕೃಷಿಕ ಕುಟುಂಬಗಳ ಆರ್ಥಿಕಾಭಿವೃದ್ಧಿಯಲ್ಲಿ ಹಾಲು ಮುಖ್ಯ ಪಾತ್ರವಹಿಸಿದೆ. ಹಸಿರು ಹುಲ್ಲಿನ ಸಮಸ್ಯೆ ನಿವಾರಣೆಗೆ ತಾಲ್ಲೂಕಿನ ಕಾಡುಗಳಲ್ಲಿ ಕ್ಷೀರೋತ್ಪಾದಕರು ಹುಲ್ಲು ಬೆಳೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ಶಿಬಿರ ಕಚೇರಿ ವ್ಯವಸ್ಥಾಪಕ ಆರ್.ಜಿ.ನರಸಿಂಹಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ನಿರ್ದೇಶಕ ಎಸ್.ಜಿ.ಜಗದೀಶ್ ಎನ್.ಜಿ.ಬೇಟಪ್ಪ, ಎಸ್.ವಿ.ಸುಧಾಕರ್, ಮುನಿವೆಂಕಟಪ್ಪ, ಅಯ್ಯಪ್ಪ, ಕೆ.ಕೆ.ಮಂಜು, ಶ್ರೀನಿವಾಸ ಗೌಡ, ಜಿ.ಎಂ.ಶ್ರೀರಾಮರೆಡ್ಡಿ, ಹರೀಶ್ ನಾರಾಯಣಸ್ವಾಮಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು