5:19 PM Monday18 - May 2026
ಬ್ರೇಕಿಂಗ್ ನ್ಯೂಸ್
ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ… ಕುದುರೆಮುಖ ರಾಷ್ಟ್ರೀಯ ಉದ್ಯಾನವನ ಪುನರ್ವಸತಿಗೆ ಹೆಚ್ಚುವರಿಯಾಗಿ 20 ಕೋಟಿ: ಮಂಗಳೂರಿನಲ್ಲಿ ಸಚಿವ ಖಂಡ್ರೆ ಚಿಕ್ಕಮಗಳೂರು | ದೇವನಗುಲ್ ಕಾಡಿನೊಳಗೆ ಅನಾಥ ಸ್ಥಿತಿಯಲ್ಲಿ ವೃದ್ಧನ ಶವ ಪತ್ತೆ ಬಳ್ಳಾರಿ | ಆಗಸ್ಟ್ 2ರಂದು ‘ಸ್ಟೀಲ್ ಸಿಟಿ ರನ್ 2026’ 5ನೇ ಆವೃತ್ತಿ:… ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಹಾಲಿನ ಕ್ಯಾನು ವಿತರಣೆ; ಕರುಗಳ ಪ್ರದರ್ಶನ, ಹಸಿರು ಮೇವು ಕ್ಷೇತ್ರೋತ್ಸವ 

13/03/2022, 10:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ

info.reporterkarnataka@gmail.com

ರೈತರು ಸರ್ಕಾರ ಹಾಗೂ ಕೋಚಿಮುಲ್ ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು. ಆರ್ಥಿಕ ಸ್ಥಿತಿ ಉತ್ತಮಪಡಿಸಿಕೊಳ್ಳಬೆಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಕೋಚಿಮುಲ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಹಾಲಿನ ಕ್ಯಾನು ವಿತರಣೆ, ಕರುಗಳ ಪ್ರದರ್ಶನ ಹಾಗೂ ಹಸಿರು ಮೇವು ಕ್ಷೇತ್ರೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ದಿನವೊಂದಕ್ಕೆ ೫೦ ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದರಿಗೆ ತಿಂಗಳಿಗೆ ರೂ.೪.೮೦ ಕೋಟಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕೃಷಿಕ ಕುಟುಂಬಗಳ ಆರ್ಥಿಕಾಭಿವೃದ್ಧಿಯಲ್ಲಿ ಹಾಲು ಮುಖ್ಯ ಪಾತ್ರವಹಿಸಿದೆ. ಹಸಿರು ಹುಲ್ಲಿನ ಸಮಸ್ಯೆ ನಿವಾರಣೆಗೆ ತಾಲ್ಲೂಕಿನ ಕಾಡುಗಳಲ್ಲಿ ಕ್ಷೀರೋತ್ಪಾದಕರು ಹುಲ್ಲು ಬೆಳೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ಶಿಬಿರ ಕಚೇರಿ ವ್ಯವಸ್ಥಾಪಕ ಆರ್.ಜಿ.ನರಸಿಂಹಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ನಿರ್ದೇಶಕ ಎಸ್.ಜಿ.ಜಗದೀಶ್ ಎನ್.ಜಿ.ಬೇಟಪ್ಪ, ಎಸ್.ವಿ.ಸುಧಾಕರ್, ಮುನಿವೆಂಕಟಪ್ಪ, ಅಯ್ಯಪ್ಪ, ಕೆ.ಕೆ.ಮಂಜು, ಶ್ರೀನಿವಾಸ ಗೌಡ, ಜಿ.ಎಂ.ಶ್ರೀರಾಮರೆಡ್ಡಿ, ಹರೀಶ್ ನಾರಾಯಣಸ್ವಾಮಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು