1:47 PM Friday24 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಹಾಲಿನ ಕ್ಯಾನು ವಿತರಣೆ; ಕರುಗಳ ಪ್ರದರ್ಶನ, ಹಸಿರು ಮೇವು ಕ್ಷೇತ್ರೋತ್ಸವ 

13/03/2022, 10:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ

info.reporterkarnataka@gmail.com

ರೈತರು ಸರ್ಕಾರ ಹಾಗೂ ಕೋಚಿಮುಲ್ ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು. ಆರ್ಥಿಕ ಸ್ಥಿತಿ ಉತ್ತಮಪಡಿಸಿಕೊಳ್ಳಬೆಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಕೋಚಿಮುಲ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಹಾಲಿನ ಕ್ಯಾನು ವಿತರಣೆ, ಕರುಗಳ ಪ್ರದರ್ಶನ ಹಾಗೂ ಹಸಿರು ಮೇವು ಕ್ಷೇತ್ರೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ದಿನವೊಂದಕ್ಕೆ ೫೦ ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದರಿಗೆ ತಿಂಗಳಿಗೆ ರೂ.೪.೮೦ ಕೋಟಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕೃಷಿಕ ಕುಟುಂಬಗಳ ಆರ್ಥಿಕಾಭಿವೃದ್ಧಿಯಲ್ಲಿ ಹಾಲು ಮುಖ್ಯ ಪಾತ್ರವಹಿಸಿದೆ. ಹಸಿರು ಹುಲ್ಲಿನ ಸಮಸ್ಯೆ ನಿವಾರಣೆಗೆ ತಾಲ್ಲೂಕಿನ ಕಾಡುಗಳಲ್ಲಿ ಕ್ಷೀರೋತ್ಪಾದಕರು ಹುಲ್ಲು ಬೆಳೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ಶಿಬಿರ ಕಚೇರಿ ವ್ಯವಸ್ಥಾಪಕ ಆರ್.ಜಿ.ನರಸಿಂಹಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ನಿರ್ದೇಶಕ ಎಸ್.ಜಿ.ಜಗದೀಶ್ ಎನ್.ಜಿ.ಬೇಟಪ್ಪ, ಎಸ್.ವಿ.ಸುಧಾಕರ್, ಮುನಿವೆಂಕಟಪ್ಪ, ಅಯ್ಯಪ್ಪ, ಕೆ.ಕೆ.ಮಂಜು, ಶ್ರೀನಿವಾಸ ಗೌಡ, ಜಿ.ಎಂ.ಶ್ರೀರಾಮರೆಡ್ಡಿ, ಹರೀಶ್ ನಾರಾಯಣಸ್ವಾಮಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು