10:38 PM Tuesday28 - April 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಹೊಸ ಕನಿಷ್ಠ ವೇತನ ಜಾರಿಗೆ ತರಲು ಯತ್ನ: ಸಂಡೂರಿನಲ್ಲಿ ಕಾರ್ಮಿಕ ಸಚಿವ… ಬಿಜೆಪಿ ಪಕ್ಷದಿಂದಲೇ ಮಹಿಳೆಯರಿಗೆ ಶೇ. 30ರಷ್ಟು ಮೀಸಲಾತಿ ಪ್ರಕಟಿಸಲಿ: ಸಚಿವ ಸಂತೋಷ್ ಲಾಡ್… Mangaluru | ಕುಕ್ಕರ್‌ ಬಾಂಬ್‌ ಸ್ಫೋಟದ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕಿತ್ತು: ಸಂತ್ರಸ್ತ… ಗಾದಿ ಪೈಪೋಟಿ | ದೆಹಲಿಗೆ ಹೋಗಲು 50 ಶಾಸಕರ ಟಿಕೆಟ್‌ ಬುಕ್ಕಿಂಗ್‌: ಕೇಂದ್ರ… Koppala | ಕುಷ್ಟಗಿಯಲ್ಲಿ ಗುಡುಗು ಸಹಿತ ಮಳೆ: ಸಿಡಿಲು ಬಡಿದು ವ್ಯಕ್ತಿ ಬಲಿ ಕೊಡಗು-ಮೈಸೂರು ರಾಜ್ಯ ಹೆದ್ದಾರಿ ಬಳಿ ಹುಲಿ ದಾಳಿಗೆ ಹಸು ಬಲಿ: ರೊಚ್ಚಿಗೆದ್ದ ಗ್ರಾಮಸ್ಥರಿಂದ… New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಹಾಲಿನ ಕ್ಯಾನು ವಿತರಣೆ; ಕರುಗಳ ಪ್ರದರ್ಶನ, ಹಸಿರು ಮೇವು ಕ್ಷೇತ್ರೋತ್ಸವ 

13/03/2022, 10:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ

info.reporterkarnataka@gmail.com

ರೈತರು ಸರ್ಕಾರ ಹಾಗೂ ಕೋಚಿಮುಲ್ ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು. ಆರ್ಥಿಕ ಸ್ಥಿತಿ ಉತ್ತಮಪಡಿಸಿಕೊಳ್ಳಬೆಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಕೋಚಿಮುಲ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಹಾಲಿನ ಕ್ಯಾನು ವಿತರಣೆ, ಕರುಗಳ ಪ್ರದರ್ಶನ ಹಾಗೂ ಹಸಿರು ಮೇವು ಕ್ಷೇತ್ರೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ದಿನವೊಂದಕ್ಕೆ ೫೦ ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದರಿಗೆ ತಿಂಗಳಿಗೆ ರೂ.೪.೮೦ ಕೋಟಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕೃಷಿಕ ಕುಟುಂಬಗಳ ಆರ್ಥಿಕಾಭಿವೃದ್ಧಿಯಲ್ಲಿ ಹಾಲು ಮುಖ್ಯ ಪಾತ್ರವಹಿಸಿದೆ. ಹಸಿರು ಹುಲ್ಲಿನ ಸಮಸ್ಯೆ ನಿವಾರಣೆಗೆ ತಾಲ್ಲೂಕಿನ ಕಾಡುಗಳಲ್ಲಿ ಕ್ಷೀರೋತ್ಪಾದಕರು ಹುಲ್ಲು ಬೆಳೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ಶಿಬಿರ ಕಚೇರಿ ವ್ಯವಸ್ಥಾಪಕ ಆರ್.ಜಿ.ನರಸಿಂಹಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ನಿರ್ದೇಶಕ ಎಸ್.ಜಿ.ಜಗದೀಶ್ ಎನ್.ಜಿ.ಬೇಟಪ್ಪ, ಎಸ್.ವಿ.ಸುಧಾಕರ್, ಮುನಿವೆಂಕಟಪ್ಪ, ಅಯ್ಯಪ್ಪ, ಕೆ.ಕೆ.ಮಂಜು, ಶ್ರೀನಿವಾಸ ಗೌಡ, ಜಿ.ಎಂ.ಶ್ರೀರಾಮರೆಡ್ಡಿ, ಹರೀಶ್ ನಾರಾಯಣಸ್ವಾಮಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು