7:37 PM Saturday8 - August 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಹಾಲಿನ ಕ್ಯಾನು ವಿತರಣೆ; ಕರುಗಳ ಪ್ರದರ್ಶನ, ಹಸಿರು ಮೇವು ಕ್ಷೇತ್ರೋತ್ಸವ 

13/03/2022, 10:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ

info.reporterkarnataka@gmail.com

ರೈತರು ಸರ್ಕಾರ ಹಾಗೂ ಕೋಚಿಮುಲ್ ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು. ಆರ್ಥಿಕ ಸ್ಥಿತಿ ಉತ್ತಮಪಡಿಸಿಕೊಳ್ಳಬೆಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಕೋಚಿಮುಲ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಹಾಲಿನ ಕ್ಯಾನು ವಿತರಣೆ, ಕರುಗಳ ಪ್ರದರ್ಶನ ಹಾಗೂ ಹಸಿರು ಮೇವು ಕ್ಷೇತ್ರೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ದಿನವೊಂದಕ್ಕೆ ೫೦ ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದರಿಗೆ ತಿಂಗಳಿಗೆ ರೂ.೪.೮೦ ಕೋಟಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕೃಷಿಕ ಕುಟುಂಬಗಳ ಆರ್ಥಿಕಾಭಿವೃದ್ಧಿಯಲ್ಲಿ ಹಾಲು ಮುಖ್ಯ ಪಾತ್ರವಹಿಸಿದೆ. ಹಸಿರು ಹುಲ್ಲಿನ ಸಮಸ್ಯೆ ನಿವಾರಣೆಗೆ ತಾಲ್ಲೂಕಿನ ಕಾಡುಗಳಲ್ಲಿ ಕ್ಷೀರೋತ್ಪಾದಕರು ಹುಲ್ಲು ಬೆಳೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ಶಿಬಿರ ಕಚೇರಿ ವ್ಯವಸ್ಥಾಪಕ ಆರ್.ಜಿ.ನರಸಿಂಹಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ನಿರ್ದೇಶಕ ಎಸ್.ಜಿ.ಜಗದೀಶ್ ಎನ್.ಜಿ.ಬೇಟಪ್ಪ, ಎಸ್.ವಿ.ಸುಧಾಕರ್, ಮುನಿವೆಂಕಟಪ್ಪ, ಅಯ್ಯಪ್ಪ, ಕೆ.ಕೆ.ಮಂಜು, ಶ್ರೀನಿವಾಸ ಗೌಡ, ಜಿ.ಎಂ.ಶ್ರೀರಾಮರೆಡ್ಡಿ, ಹರೀಶ್ ನಾರಾಯಣಸ್ವಾಮಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು