1:39 PM Tuesday14 - October 2025
ಬ್ರೇಕಿಂಗ್ ನ್ಯೂಸ್
ಅಕ್ರಮ ಗೋವು ಸಾಗಾಟ ಮಾಡುತ್ತಿದ್ದ ವಾಹನ ಪಲ್ಟಿ: ಗಾಯಗೊಂಡ ಗೋವುಗಳನ್ನು ಬಿಟ್ಟು ಆರೋಪಿಗಳು… ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಹೈಕಮಾಂಡ್ ನಡೆ ನಿಗೂಢ: ಸಚಿವ ಎಚ್. ಸಿ. ಮಹದೇವಪ್ಪ ಹಾಸನಾಂಬ ದರ್ಶನಕ್ಕೆ ಜನರಿಗೆ ತಮ್ಮ ಗುರುತಿನ ಚೀಟಿ ನೀಡಿದ ಇಬ್ಬರು ಅಧಿಕಾರಿಗಳು ಸಸ್ಪೆಂಡ್ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕೃಷಿ ಅಭಿವೃದ್ಧಿಯಾದರೆ ಮಾತ್ರ ದೇಶದ ಅಭಿವೃದ್ಧಿ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮಡಿಕೇರಿಯಲ್ಲಿ ಡಿಜಿಟಲ್ ಸ್ಟುಡಿಯೋ ಕಳ್ಳತನ ಪ್ರಕರಣ: ಐವರು ಚೋರರ ಬಂಧನ ಆಶ್ರಮ ಶಾಲೆಯಲ್ಲಿ ಬೆಂಕಿ ಅವಘಡ: ಮೃತ ವಿದ್ಯಾರ್ಥಿ ಪುಷ್ಪಕ್ ಕುಟುಂಬಕ್ಕೆ 5 ಲಕ್ಷ… ಕಾವೇರಿ ಸಂಕ್ರಮಣ: ಅ. 17ರಂದು ಕೊಡಗು ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ; ಮಧ್ಯಾಹ್ನ 1.44ಕ್ಕೆ… 2005ರ ಪೂರ್ವ ಅರಣ್ಯಭೂಮಿಯಲ್ಲಿ ಬದುಕು ಕಟ್ಟಿಕೊಂಡವರಿಗೆ ಭೂಮಿಯ ಹಕ್ಕು: ಮುಖ್ಯಮಂತ್ರಿ ಸಿದ್ದರಾಮಯ್ಯ ‘ನೀರಿದ್ದರೆ ನಾಳೆ – ವಾಟರ್ ಇಸ್ ಫ್ಯೂಚರ್’: ಯೋಜನೆಗೆ ಚಾಲನೆ’: ಬರುವ ಡಿಸೆಂಬರ್…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಹಾಲಿನ ಕ್ಯಾನು ವಿತರಣೆ; ಕರುಗಳ ಪ್ರದರ್ಶನ, ಹಸಿರು ಮೇವು ಕ್ಷೇತ್ರೋತ್ಸವ 

13/03/2022, 10:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ

info.reporterkarnataka@gmail.com

ರೈತರು ಸರ್ಕಾರ ಹಾಗೂ ಕೋಚಿಮುಲ್ ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು. ಆರ್ಥಿಕ ಸ್ಥಿತಿ ಉತ್ತಮಪಡಿಸಿಕೊಳ್ಳಬೆಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಕೋಚಿಮುಲ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಹಾಲಿನ ಕ್ಯಾನು ವಿತರಣೆ, ಕರುಗಳ ಪ್ರದರ್ಶನ ಹಾಗೂ ಹಸಿರು ಮೇವು ಕ್ಷೇತ್ರೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ದಿನವೊಂದಕ್ಕೆ ೫೦ ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದರಿಗೆ ತಿಂಗಳಿಗೆ ರೂ.೪.೮೦ ಕೋಟಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕೃಷಿಕ ಕುಟುಂಬಗಳ ಆರ್ಥಿಕಾಭಿವೃದ್ಧಿಯಲ್ಲಿ ಹಾಲು ಮುಖ್ಯ ಪಾತ್ರವಹಿಸಿದೆ. ಹಸಿರು ಹುಲ್ಲಿನ ಸಮಸ್ಯೆ ನಿವಾರಣೆಗೆ ತಾಲ್ಲೂಕಿನ ಕಾಡುಗಳಲ್ಲಿ ಕ್ಷೀರೋತ್ಪಾದಕರು ಹುಲ್ಲು ಬೆಳೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ಶಿಬಿರ ಕಚೇರಿ ವ್ಯವಸ್ಥಾಪಕ ಆರ್.ಜಿ.ನರಸಿಂಹಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ನಿರ್ದೇಶಕ ಎಸ್.ಜಿ.ಜಗದೀಶ್ ಎನ್.ಜಿ.ಬೇಟಪ್ಪ, ಎಸ್.ವಿ.ಸುಧಾಕರ್, ಮುನಿವೆಂಕಟಪ್ಪ, ಅಯ್ಯಪ್ಪ, ಕೆ.ಕೆ.ಮಂಜು, ಶ್ರೀನಿವಾಸ ಗೌಡ, ಜಿ.ಎಂ.ಶ್ರೀರಾಮರೆಡ್ಡಿ, ಹರೀಶ್ ನಾರಾಯಣಸ್ವಾಮಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು