11:05 AM Friday9 - January 2026
ಬ್ರೇಕಿಂಗ್ ನ್ಯೂಸ್
ನಿಷ್ಕ್ರಿಯ ಪತ್ರಿಕೆಗಾಗಿ ರಾಜ್ಯದ ಖಜಾನೆ ಲೂಟಿ ಮಾಡಿದ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ವಿಮಾನದಲ್ಲಿ ಶೈಕ್ಷಣಿಕ ಪ್ರವಾಸ: ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದು ನಿಂತ ಮುತ್ತಿಗೆಪುರ ಸರಕಾರಿ… ಅಕ್ರಮ ಗಾಂಜಾ ಮಾರಾಟ: ಅಸ್ಸಾಂ ಮೂಲದ ಇಬ್ಬರು ಆರೋಪಿಗಳ ಬಂಧನ ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ಪಾಸ್: ಎಎಪಿ ಯುವ ಘಟಕದಿಂದ ಸಹಿ ಸಂಗ್ರಹಣ… ಬಾಂಗ್ಲಾದವರು ನುಸುಳುವವರೆಗೆ ಕೇಂದ್ರ ಗೃಹ ಇಲಾಖೆ ನಿದ್ದೆಗೆ ಜಾರಿತ್ತಾ?: ಸಚಿವ ಕೃಷ್ಣ ಬೈರೇಗೌಡ… ಇನ್ಫೋಸಿಸ್ ನಿಂದ 53.5 ಎಕರೆ ಭೂಮಿ ರಿಯಲ್ ಎಸ್ಟೇಟ್ ಸಂಸ್ಥೆಗೆ ಮಾರಾಟ: ತನಿಖೆಗೆ… ಕ್ವಾಂಟಮ್ ತಂತ್ರಜ್ಞಾನ ಮತ್ತು ಸೆಮಿಕಂಡಕ್ಟರ್ ಸಹಭಾಗಿತ್ವಕ್ಕೆ ಪೆನಾಂಗ್ ಉಪಮುಖ್ಯಮಂತ್ರಿ ಒಲವು ಲಾರಿ- ಬೈಕ್ ಡಿಕ್ಕಿ: ಗಾಯಾಳು ಬೈಕ್ ಸವಾರ ಗೋಣಿಕೊಪ್ಪಲು ಲೋಪಮುದ್ರ ಆಸ್ಪತ್ರೆಯಲ್ಲಿ ಸಾವು ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ; ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ: ಮುಖ್ಯಮಂತ್ರಿ

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಹಾಲಿನ ಕ್ಯಾನು ವಿತರಣೆ; ಕರುಗಳ ಪ್ರದರ್ಶನ, ಹಸಿರು ಮೇವು ಕ್ಷೇತ್ರೋತ್ಸವ 

13/03/2022, 10:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ

info.reporterkarnataka@gmail.com

ರೈತರು ಸರ್ಕಾರ ಹಾಗೂ ಕೋಚಿಮುಲ್ ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು. ಆರ್ಥಿಕ ಸ್ಥಿತಿ ಉತ್ತಮಪಡಿಸಿಕೊಳ್ಳಬೆಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಕೋಚಿಮುಲ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಹಾಲಿನ ಕ್ಯಾನು ವಿತರಣೆ, ಕರುಗಳ ಪ್ರದರ್ಶನ ಹಾಗೂ ಹಸಿರು ಮೇವು ಕ್ಷೇತ್ರೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ದಿನವೊಂದಕ್ಕೆ ೫೦ ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದರಿಗೆ ತಿಂಗಳಿಗೆ ರೂ.೪.೮೦ ಕೋಟಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕೃಷಿಕ ಕುಟುಂಬಗಳ ಆರ್ಥಿಕಾಭಿವೃದ್ಧಿಯಲ್ಲಿ ಹಾಲು ಮುಖ್ಯ ಪಾತ್ರವಹಿಸಿದೆ. ಹಸಿರು ಹುಲ್ಲಿನ ಸಮಸ್ಯೆ ನಿವಾರಣೆಗೆ ತಾಲ್ಲೂಕಿನ ಕಾಡುಗಳಲ್ಲಿ ಕ್ಷೀರೋತ್ಪಾದಕರು ಹುಲ್ಲು ಬೆಳೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ಶಿಬಿರ ಕಚೇರಿ ವ್ಯವಸ್ಥಾಪಕ ಆರ್.ಜಿ.ನರಸಿಂಹಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ನಿರ್ದೇಶಕ ಎಸ್.ಜಿ.ಜಗದೀಶ್ ಎನ್.ಜಿ.ಬೇಟಪ್ಪ, ಎಸ್.ವಿ.ಸುಧಾಕರ್, ಮುನಿವೆಂಕಟಪ್ಪ, ಅಯ್ಯಪ್ಪ, ಕೆ.ಕೆ.ಮಂಜು, ಶ್ರೀನಿವಾಸ ಗೌಡ, ಜಿ.ಎಂ.ಶ್ರೀರಾಮರೆಡ್ಡಿ, ಹರೀಶ್ ನಾರಾಯಣಸ್ವಾಮಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು