3:34 PM Thursday23 - April 2026
ಬ್ರೇಕಿಂಗ್ ನ್ಯೂಸ್
ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಹಾಲಿನ ಕ್ಯಾನು ವಿತರಣೆ; ಕರುಗಳ ಪ್ರದರ್ಶನ, ಹಸಿರು ಮೇವು ಕ್ಷೇತ್ರೋತ್ಸವ 

13/03/2022, 10:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ

info.reporterkarnataka@gmail.com

ರೈತರು ಸರ್ಕಾರ ಹಾಗೂ ಕೋಚಿಮುಲ್ ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು. ಆರ್ಥಿಕ ಸ್ಥಿತಿ ಉತ್ತಮಪಡಿಸಿಕೊಳ್ಳಬೆಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಕೋಚಿಮುಲ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಹಾಲಿನ ಕ್ಯಾನು ವಿತರಣೆ, ಕರುಗಳ ಪ್ರದರ್ಶನ ಹಾಗೂ ಹಸಿರು ಮೇವು ಕ್ಷೇತ್ರೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ದಿನವೊಂದಕ್ಕೆ ೫೦ ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದರಿಗೆ ತಿಂಗಳಿಗೆ ರೂ.೪.೮೦ ಕೋಟಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕೃಷಿಕ ಕುಟುಂಬಗಳ ಆರ್ಥಿಕಾಭಿವೃದ್ಧಿಯಲ್ಲಿ ಹಾಲು ಮುಖ್ಯ ಪಾತ್ರವಹಿಸಿದೆ. ಹಸಿರು ಹುಲ್ಲಿನ ಸಮಸ್ಯೆ ನಿವಾರಣೆಗೆ ತಾಲ್ಲೂಕಿನ ಕಾಡುಗಳಲ್ಲಿ ಕ್ಷೀರೋತ್ಪಾದಕರು ಹುಲ್ಲು ಬೆಳೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ಶಿಬಿರ ಕಚೇರಿ ವ್ಯವಸ್ಥಾಪಕ ಆರ್.ಜಿ.ನರಸಿಂಹಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ನಿರ್ದೇಶಕ ಎಸ್.ಜಿ.ಜಗದೀಶ್ ಎನ್.ಜಿ.ಬೇಟಪ್ಪ, ಎಸ್.ವಿ.ಸುಧಾಕರ್, ಮುನಿವೆಂಕಟಪ್ಪ, ಅಯ್ಯಪ್ಪ, ಕೆ.ಕೆ.ಮಂಜು, ಶ್ರೀನಿವಾಸ ಗೌಡ, ಜಿ.ಎಂ.ಶ್ರೀರಾಮರೆಡ್ಡಿ, ಹರೀಶ್ ನಾರಾಯಣಸ್ವಾಮಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು