11:32 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಶ್ರೀನಿವಾಸಪುರ: ಹಾಲಿನ ಕ್ಯಾನು ವಿತರಣೆ; ಕರುಗಳ ಪ್ರದರ್ಶನ, ಹಸಿರು ಮೇವು ಕ್ಷೇತ್ರೋತ್ಸವ 

13/03/2022, 10:49

ಶಬ್ಬೀರ್ ಅಹ್ಮದ್ ಶ್ರೀನಿವಾಸಪುರ

info.reporterkarnataka@gmail.com

ರೈತರು ಸರ್ಕಾರ ಹಾಗೂ ಕೋಚಿಮುಲ್ ನೀಡುವ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಉತ್ತಮ ಗುಣಮಟ್ಟದ ಹಾಲು ಉತ್ಪಾದಿಸಬೇಕು. ಆರ್ಥಿಕ ಸ್ಥಿತಿ ಉತ್ತಮಪಡಿಸಿಕೊಳ್ಳಬೆಕು ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಅರಿಕೆರೆ ಗ್ರಾಮದಲ್ಲಿ ಕೋಚಿಮುಲ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಹಾಲಿನ ಕ್ಯಾನು ವಿತರಣೆ, ಕರುಗಳ ಪ್ರದರ್ಶನ ಹಾಗೂ ಹಸಿರು ಮೇವು ಕ್ಷೇತ್ರೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ದಿನವೊಂದಕ್ಕೆ ೫೦ ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಹಾಲು ಉತ್ಪಾದರಿಗೆ ತಿಂಗಳಿಗೆ ರೂ.೪.೮೦ ಕೋಟಿ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಕೃಷಿಕ ಕುಟುಂಬಗಳ ಆರ್ಥಿಕಾಭಿವೃದ್ಧಿಯಲ್ಲಿ ಹಾಲು ಮುಖ್ಯ ಪಾತ್ರವಹಿಸಿದೆ. ಹಸಿರು ಹುಲ್ಲಿನ ಸಮಸ್ಯೆ ನಿವಾರಣೆಗೆ ತಾಲ್ಲೂಕಿನ ಕಾಡುಗಳಲ್ಲಿ ಕ್ಷೀರೋತ್ಪಾದಕರು ಹುಲ್ಲು ಬೆಳೆಯಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ಶಿಬಿರ ಕಚೇರಿ ವ್ಯವಸ್ಥಾಪಕ ಆರ್.ಜಿ.ನರಸಿಂಹಯ್ಯ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ನಿರ್ದೇಶಕ ಎಸ್.ಜಿ.ಜಗದೀಶ್ ಎನ್.ಜಿ.ಬೇಟಪ್ಪ, ಎಸ್.ವಿ.ಸುಧಾಕರ್, ಮುನಿವೆಂಕಟಪ್ಪ, ಅಯ್ಯಪ್ಪ, ಕೆ.ಕೆ.ಮಂಜು, ಶ್ರೀನಿವಾಸ ಗೌಡ, ಜಿ.ಎಂ.ಶ್ರೀರಾಮರೆಡ್ಡಿ, ಹರೀಶ್ ನಾರಾಯಣಸ್ವಾಮಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು