5:18 PM Sunday8 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ತಮಿಳುನಾಡು:10 ರೂ.ಗಳ ನಾಣ್ಯ ಕೊಟ್ಟು 6 ಲಕ್ಷ ಮೌಲ್ಯದ ಕಾರು ಖರೀದಿಸಿದ ಅಂಗಡಿ ಮಾಲೀಕ!

21/06/2022, 17:51

ಚೆನ್ನೈ(reporterkarnataka.com): ಜನರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದರಿಂದ ಬೇಸತ್ತ ತಮಿಳುನಾಡಿನ ವ್ಯಕ್ತಿಯೊಬ್ಬರು 10 ರೂ. ನಾಣ್ಯಗಳನ್ನು ಸಂಗ್ರಹಿಸಿ ಅದರಿಂದಲೇ 6 ಲಕ್ಷ ರೂ.ಮೌಲ್ಯದ ಕಾರು ಖರೀದಿಸಿದ್ದಾರೆ.

ಅರೂರು ನಿವಾಸಿಯಾದ ವೆಟ್ರಿವೇಲ್‌ ಎಂಬವರು ತಾಯಿಯ ಅಂಗಡಿಯನ್ನು ನಡೆಸುತ್ತಿದ್ದರು. ಗ್ರಾಹಕರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ ಅಂಗಡಿಯಲ್ಲಿ 10 ರೂ. ನಾಣ್ಯಗಳು ದೊಡ್ಡ ಮಟ್ಟದಲ್ಲಿ ಸಂಗ್ರಹವಾಗಿದ್ದವು. 10 ರೂ. ನಾಣ್ಯಗಳು ಇನ್ನೂ ಬಳಕೆಗೆ ಯೋಗ್ಯವಾಗಿವೆ ಎಂದು ಅರಿವು ಮೂಡಿಸಲು ಸುಮಾರು 6 ಲಕ್ಷ ರೂ. ಮೌಲ್ಯದ ನಾಣ್ಯಗಳನ್ನು ಸಂಗ್ರಹಿಸಿ ಅದರಿಂದ ವೆಟ್ರಿವೇಲ ಕಾರನ್ನು ಖರೀದಿಸಿದ್ದಾರೆ.

ದೊಡ್ಡ ಚೀಲದಲ್ಲಿ ನಾಣ್ಯಗಳೊಂದಿಗೆ ಧರ್ಮಪುರಿಯ ಕಾರು ಶೋ ರೂಮಿಗೆ ಕಾರು ಖರೀದಿಸಲು ಬಂದಾಗ ಮೊದಲು ಅಲ್ಲಿನ ಸಿಬ್ಬಂದಿಗಳಿಗೆ ಆಶ್ಚರ್ಯವಾಯಿತು. ನಂತರ ವೆಟ್ರಿವೇಲ್‌ ದೃಢ ನಿರ್ಣಯ ನೋಡಿ ಕಾರು ಮಾರಾಟ ಮಾಡಲು ಒಪ್ಪಿಕೊಂಡರು. ಚೀಲಗಟ್ಟಲೆ ನಾಣ್ಯಗಳನ್ನು ಎಣಿಸಿದ ನಂತರ ಕೊನೆಗೂ ಮಾರುತಿ ಸುಜುಕಿ ಇಕೋ ಕಾರನ್ನು ವೆಟ್ರಿವೇಲನಿಗೆ ಹಸ್ತಾಂತರಿಸಲಾಗಿದೆ’ ಎಂದು ಶೋ ರೂಂನವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು