4:41 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ತಮಿಳುನಾಡು:10 ರೂ.ಗಳ ನಾಣ್ಯ ಕೊಟ್ಟು 6 ಲಕ್ಷ ಮೌಲ್ಯದ ಕಾರು ಖರೀದಿಸಿದ ಅಂಗಡಿ ಮಾಲೀಕ!

21/06/2022, 17:51

ಚೆನ್ನೈ(reporterkarnataka.com): ಜನರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದರಿಂದ ಬೇಸತ್ತ ತಮಿಳುನಾಡಿನ ವ್ಯಕ್ತಿಯೊಬ್ಬರು 10 ರೂ. ನಾಣ್ಯಗಳನ್ನು ಸಂಗ್ರಹಿಸಿ ಅದರಿಂದಲೇ 6 ಲಕ್ಷ ರೂ.ಮೌಲ್ಯದ ಕಾರು ಖರೀದಿಸಿದ್ದಾರೆ.

ಅರೂರು ನಿವಾಸಿಯಾದ ವೆಟ್ರಿವೇಲ್‌ ಎಂಬವರು ತಾಯಿಯ ಅಂಗಡಿಯನ್ನು ನಡೆಸುತ್ತಿದ್ದರು. ಗ್ರಾಹಕರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ ಅಂಗಡಿಯಲ್ಲಿ 10 ರೂ. ನಾಣ್ಯಗಳು ದೊಡ್ಡ ಮಟ್ಟದಲ್ಲಿ ಸಂಗ್ರಹವಾಗಿದ್ದವು. 10 ರೂ. ನಾಣ್ಯಗಳು ಇನ್ನೂ ಬಳಕೆಗೆ ಯೋಗ್ಯವಾಗಿವೆ ಎಂದು ಅರಿವು ಮೂಡಿಸಲು ಸುಮಾರು 6 ಲಕ್ಷ ರೂ. ಮೌಲ್ಯದ ನಾಣ್ಯಗಳನ್ನು ಸಂಗ್ರಹಿಸಿ ಅದರಿಂದ ವೆಟ್ರಿವೇಲ ಕಾರನ್ನು ಖರೀದಿಸಿದ್ದಾರೆ.

ದೊಡ್ಡ ಚೀಲದಲ್ಲಿ ನಾಣ್ಯಗಳೊಂದಿಗೆ ಧರ್ಮಪುರಿಯ ಕಾರು ಶೋ ರೂಮಿಗೆ ಕಾರು ಖರೀದಿಸಲು ಬಂದಾಗ ಮೊದಲು ಅಲ್ಲಿನ ಸಿಬ್ಬಂದಿಗಳಿಗೆ ಆಶ್ಚರ್ಯವಾಯಿತು. ನಂತರ ವೆಟ್ರಿವೇಲ್‌ ದೃಢ ನಿರ್ಣಯ ನೋಡಿ ಕಾರು ಮಾರಾಟ ಮಾಡಲು ಒಪ್ಪಿಕೊಂಡರು. ಚೀಲಗಟ್ಟಲೆ ನಾಣ್ಯಗಳನ್ನು ಎಣಿಸಿದ ನಂತರ ಕೊನೆಗೂ ಮಾರುತಿ ಸುಜುಕಿ ಇಕೋ ಕಾರನ್ನು ವೆಟ್ರಿವೇಲನಿಗೆ ಹಸ್ತಾಂತರಿಸಲಾಗಿದೆ’ ಎಂದು ಶೋ ರೂಂನವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು