7:46 PM Sunday5 - April 2026
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ

ಇತ್ತೀಚಿನ ಸುದ್ದಿ

ತಮಿಳುನಾಡು:10 ರೂ.ಗಳ ನಾಣ್ಯ ಕೊಟ್ಟು 6 ಲಕ್ಷ ಮೌಲ್ಯದ ಕಾರು ಖರೀದಿಸಿದ ಅಂಗಡಿ ಮಾಲೀಕ!

21/06/2022, 17:51

ಚೆನ್ನೈ(reporterkarnataka.com): ಜನರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದರಿಂದ ಬೇಸತ್ತ ತಮಿಳುನಾಡಿನ ವ್ಯಕ್ತಿಯೊಬ್ಬರು 10 ರೂ. ನಾಣ್ಯಗಳನ್ನು ಸಂಗ್ರಹಿಸಿ ಅದರಿಂದಲೇ 6 ಲಕ್ಷ ರೂ.ಮೌಲ್ಯದ ಕಾರು ಖರೀದಿಸಿದ್ದಾರೆ.

ಅರೂರು ನಿವಾಸಿಯಾದ ವೆಟ್ರಿವೇಲ್‌ ಎಂಬವರು ತಾಯಿಯ ಅಂಗಡಿಯನ್ನು ನಡೆಸುತ್ತಿದ್ದರು. ಗ್ರಾಹಕರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ ಅಂಗಡಿಯಲ್ಲಿ 10 ರೂ. ನಾಣ್ಯಗಳು ದೊಡ್ಡ ಮಟ್ಟದಲ್ಲಿ ಸಂಗ್ರಹವಾಗಿದ್ದವು. 10 ರೂ. ನಾಣ್ಯಗಳು ಇನ್ನೂ ಬಳಕೆಗೆ ಯೋಗ್ಯವಾಗಿವೆ ಎಂದು ಅರಿವು ಮೂಡಿಸಲು ಸುಮಾರು 6 ಲಕ್ಷ ರೂ. ಮೌಲ್ಯದ ನಾಣ್ಯಗಳನ್ನು ಸಂಗ್ರಹಿಸಿ ಅದರಿಂದ ವೆಟ್ರಿವೇಲ ಕಾರನ್ನು ಖರೀದಿಸಿದ್ದಾರೆ.

ದೊಡ್ಡ ಚೀಲದಲ್ಲಿ ನಾಣ್ಯಗಳೊಂದಿಗೆ ಧರ್ಮಪುರಿಯ ಕಾರು ಶೋ ರೂಮಿಗೆ ಕಾರು ಖರೀದಿಸಲು ಬಂದಾಗ ಮೊದಲು ಅಲ್ಲಿನ ಸಿಬ್ಬಂದಿಗಳಿಗೆ ಆಶ್ಚರ್ಯವಾಯಿತು. ನಂತರ ವೆಟ್ರಿವೇಲ್‌ ದೃಢ ನಿರ್ಣಯ ನೋಡಿ ಕಾರು ಮಾರಾಟ ಮಾಡಲು ಒಪ್ಪಿಕೊಂಡರು. ಚೀಲಗಟ್ಟಲೆ ನಾಣ್ಯಗಳನ್ನು ಎಣಿಸಿದ ನಂತರ ಕೊನೆಗೂ ಮಾರುತಿ ಸುಜುಕಿ ಇಕೋ ಕಾರನ್ನು ವೆಟ್ರಿವೇಲನಿಗೆ ಹಸ್ತಾಂತರಿಸಲಾಗಿದೆ’ ಎಂದು ಶೋ ರೂಂನವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು