10:36 PM Saturday25 - July 2026
ಬ್ರೇಕಿಂಗ್ ನ್ಯೂಸ್
ಮುಸ್ಲಿಮರು ಮಾತನಾಡಿದ್ರೆ ಟೆರರಿಸ್ಟ್, ಚಿಂತಕರು ಮಾತನಾಡಿದ್ರೆ ನಕ್ಸಲ್, ಹಾಗಾದ್ರೆ ದೇಶ ಭಕ್ತರು ಯಾರು?:… ಮೂಡಿಗೆರೆಯಲ್ಲಿ ಖೋಟಾ ನೋಟು ಚಲಾವಣೆ ಜಾಲ ಭೇದಿಸಿದ ಪೋಲಿಸರು: ಇಬ್ಬರ ಬಂಧನ, ₹18,000… ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ…

ಇತ್ತೀಚಿನ ಸುದ್ದಿ

ತಮಿಳುನಾಡು:10 ರೂ.ಗಳ ನಾಣ್ಯ ಕೊಟ್ಟು 6 ಲಕ್ಷ ಮೌಲ್ಯದ ಕಾರು ಖರೀದಿಸಿದ ಅಂಗಡಿ ಮಾಲೀಕ!

21/06/2022, 17:51

ಚೆನ್ನೈ(reporterkarnataka.com): ಜನರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದರಿಂದ ಬೇಸತ್ತ ತಮಿಳುನಾಡಿನ ವ್ಯಕ್ತಿಯೊಬ್ಬರು 10 ರೂ. ನಾಣ್ಯಗಳನ್ನು ಸಂಗ್ರಹಿಸಿ ಅದರಿಂದಲೇ 6 ಲಕ್ಷ ರೂ.ಮೌಲ್ಯದ ಕಾರು ಖರೀದಿಸಿದ್ದಾರೆ.

ಅರೂರು ನಿವಾಸಿಯಾದ ವೆಟ್ರಿವೇಲ್‌ ಎಂಬವರು ತಾಯಿಯ ಅಂಗಡಿಯನ್ನು ನಡೆಸುತ್ತಿದ್ದರು. ಗ್ರಾಹಕರು 10 ರೂ. ನಾಣ್ಯವನ್ನು ಸ್ವೀಕರಿಸಲು ನಿರಾಕರಿಸಿದ್ದರು. ಹೀಗಾಗಿ ಅಂಗಡಿಯಲ್ಲಿ 10 ರೂ. ನಾಣ್ಯಗಳು ದೊಡ್ಡ ಮಟ್ಟದಲ್ಲಿ ಸಂಗ್ರಹವಾಗಿದ್ದವು. 10 ರೂ. ನಾಣ್ಯಗಳು ಇನ್ನೂ ಬಳಕೆಗೆ ಯೋಗ್ಯವಾಗಿವೆ ಎಂದು ಅರಿವು ಮೂಡಿಸಲು ಸುಮಾರು 6 ಲಕ್ಷ ರೂ. ಮೌಲ್ಯದ ನಾಣ್ಯಗಳನ್ನು ಸಂಗ್ರಹಿಸಿ ಅದರಿಂದ ವೆಟ್ರಿವೇಲ ಕಾರನ್ನು ಖರೀದಿಸಿದ್ದಾರೆ.

ದೊಡ್ಡ ಚೀಲದಲ್ಲಿ ನಾಣ್ಯಗಳೊಂದಿಗೆ ಧರ್ಮಪುರಿಯ ಕಾರು ಶೋ ರೂಮಿಗೆ ಕಾರು ಖರೀದಿಸಲು ಬಂದಾಗ ಮೊದಲು ಅಲ್ಲಿನ ಸಿಬ್ಬಂದಿಗಳಿಗೆ ಆಶ್ಚರ್ಯವಾಯಿತು. ನಂತರ ವೆಟ್ರಿವೇಲ್‌ ದೃಢ ನಿರ್ಣಯ ನೋಡಿ ಕಾರು ಮಾರಾಟ ಮಾಡಲು ಒಪ್ಪಿಕೊಂಡರು. ಚೀಲಗಟ್ಟಲೆ ನಾಣ್ಯಗಳನ್ನು ಎಣಿಸಿದ ನಂತರ ಕೊನೆಗೂ ಮಾರುತಿ ಸುಜುಕಿ ಇಕೋ ಕಾರನ್ನು ವೆಟ್ರಿವೇಲನಿಗೆ ಹಸ್ತಾಂತರಿಸಲಾಗಿದೆ’ ಎಂದು ಶೋ ರೂಂನವರು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು